ಬ್ರೇಕಿಂಗ್ ನ್ಯೂಸ್
21-04-22 11:45 am Mangalore Correspondent ಕರಾವಳಿ
ಮಂಗಳೂರು, ಎ.21: 'ಒಂದು ದೇಶ, ಒಂದೇ ಜನ’ ಎಂಬ ಸಂದೇಶ ಹಿಡಿದು ತನ್ನ 21ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ಬೈಕಿನಲ್ಲಿ ಭಾರತ ಪರ್ಯಟನೆ ಆರಂಭಿಸಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಅಮೃತಾ ಜೋಶಿ 60 ದಿವಸಗಳ ಸಂಚಾರ ಪೂರೈಸಿದ್ದಾರೆ.
2022ರ ಫೆಬ್ರವರಿ 5ರಂದು ಕೇರಳದ ಕಲ್ಲಿಕೋಟೆಯಿಂದ ಸಂಚಾರ ಆರಂಭಿಸಿದ್ದ ಅಮೃತಾ ಜೋಶಿ ತಮಿಳುನಾಡು, ಆಂಧ್ರ ಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳನ್ನು ಸಂದರ್ಶಿಸಿದ್ದಾರೆ. ಈಶಾನ್ಯ ರಾಜ್ಯಗಳ ಭೇಟಿಯ ಜೊತೆಗೆ ನೆರೆಯ ಬಾಂಗ್ಲಾದೇಶ, ಮ್ಯಾನ್ಮಾರ್ಗಳನ್ನು ಕೂಡ ಅಮೃತಾ ಸಂದರ್ಶಿಸಿದ್ದಾರೆ. ಇದುವರೆಗೆ 8,040 ಕಿ.ಮೀ. ಯಾನ ಪೂರೈಸಿದ್ದಾಗಿ ಅಮೃತಾ ತಿಳಿಸಿದ್ದಾರೆ.
ಮುಂದೆ ನೇಪಾಳದಿಂದ ಆರಂಭಿಸಿ ಬಿಹಾರ, ಝಾರ್ಖಂಡ್, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ ತಲುಪಲಿದ್ದು ಕೊನೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಯಾತ್ರೆಯನ್ನು ಮುಕ್ತಾಯ ಮಾಡಲಿದ್ದಾರೆ.
“ಸಿ.ಆರ್.ಎಫ್ ವುಮೆನ್ ಆನ್ ವೀಲ್ಸ್’ ಎಂಬ ಕ್ಲಬ್ ಸದಸ್ಯೆಯಾಗಿರುವ ಅಮೃತಾ ಜೋಶಿ ಕುಂಬಳೆ ನಿವಾಸಿಗಳಾದ ದಿ| ಅಶೋಕ್ ಜೋಶಿ ಮತ್ತು ಅನ್ನಪೂರ್ಣ ಜೋಶಿ ದಂಪತಿಯ ಕಿರಿಯ ಪುತ್ರಿ. ಅಮೃತಾ ಜೋಶಿ ದೇಶ ಸಂಚಾರಕ್ಕೆ ವಿವಿಧ ಸಂಘಟನೆಗಳ ಬೆಂಬಲವೂ ಸಿಕ್ಕಿದೆ.
ಈಶಾನ್ಯ ರಾಜ್ಯದ ಪ್ರಯಾಣದ ಬಗ್ಗೆ ಎಲ್ಲರೂ ಆ ರಾಜ್ಯಗಳು ಸುರಕ್ಷಿತವಲ್ಲ ಎಂದಿದ್ದರು. ಆದರೆ ಈ ಯಾನದ ಬಳಿಕ ಈಶಾನ್ಯ ರಾಜ್ಯಗಳು ಸುರಕ್ಷಿತ ಸ್ಥಳ ಮತ್ತು ಅಲ್ಲಿನ ಜನರು ಮೃದು ಮನಸ್ಸಿನವರು ಎಂದು ಹೇಳುತ್ತೇನೆ. ಅವರ ಪ್ರೀತಿ ಮತ್ತು ಬೆಂಬಲದಿಂದಾಗಿ ಇಡೀ ಭಾರತ ಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಎಂದು ಅಮೃತಾ ಜೋಶಿ ಹೇಳಿದ್ದಾರೆ.
Youngest solo rider Amrutha Joshi from Kerala to cover northeast by bike.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm