ಬ್ರೇಕಿಂಗ್ ನ್ಯೂಸ್
24-09-20 03:01 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಹಿರಿಯ ಧಾರ್ಮಿಕ ಮುಖಂಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಆಗಿರುವ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ನರಿಂಗಾನ ನಿವಾಸಿಯಾಗಿರುವ ಮುಸ್ಲಿಯಾರ್, ದೇವಬಂದ್ ಅರೆಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದರು. ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೇ ತರಗತಿ ಕಲಿತ ಬಳಿಕ ಧಾರ್ಮಿಕ ಶಿಕ್ಷಣ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ. ಉಸ್ತಾದರು, ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm