ಬ್ರೇಕಿಂಗ್ ನ್ಯೂಸ್
24-09-20 03:01 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಹಿರಿಯ ಧಾರ್ಮಿಕ ಮುಖಂಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಆಗಿರುವ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ನರಿಂಗಾನ ನಿವಾಸಿಯಾಗಿರುವ ಮುಸ್ಲಿಯಾರ್, ದೇವಬಂದ್ ಅರೆಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದರು. ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೇ ತರಗತಿ ಕಲಿತ ಬಳಿಕ ಧಾರ್ಮಿಕ ಶಿಕ್ಷಣ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ. ಉಸ್ತಾದರು, ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am