ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am