ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm