ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm