ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm