ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.
ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm