ಬ್ರೇಕಿಂಗ್ ನ್ಯೂಸ್
28-04-22 02:15 pm Mangalore Correspondent ಕರಾವಳಿ
ಮಂಗಳೂರು, ಎ.28 : ರಾಜ್ಯದ ಆರೂವರೆ ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೂಡುಬಿದಿರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ. ಡೀಮ್ಡ್ ಫಾರೆಸ್ಟ್ ಕಾರಣದಿಂದ ಜನರು ತೀವ್ರ ಕಿರುಕುಳ ಅನುಭವಿಸುತ್ತಿದ್ದರು. ಆದರೆ ಸಮಸ್ಯೆ ಬಗೆಹರಿದಿರಲಿಲ್ಲ. ಇದೀಗ 6.5 ಲಕ್ಷ ಎಕ್ರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದೇನೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಡೀಮ್ಡ್ ಅರಣ್ಯ ಸಮಸ್ಯೆಯಂತೆಯೇ ಕುಮ್ಕಿ, ಕಾನ ಬಾಣೆ, ಸೊಪ್ಪಿನ ಬೆಟ್ಟ ಸಮಸ್ಯೆಗಳನ್ನೂ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
ವಿರೋಧ ಪಕ್ಷದವರು ವಿವಿಧ ವಿಚಾರಗಳನ್ನು ಹೇಳುತ್ತಾರೆ, ಆದರೆ ನಾನು ಅದು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ನನ್ನ ರಾಜ್ಯದ ಅಭಿವೃದ್ಧಿ ಕಾರ್ಯಗಳೇ ನನಗೆ ಮುಖ್ಯ. ನನಗೆ ಅಭಿವೃದ್ಧಿ ಕೆಲಸ ಮಾಡಲು ದಿನದ 24 ಗಂಟೆಯೂ ಸಾಲದು. ಹಾಗಿರುವಾಗ ಸರಿ ತಪ್ಪು ತೀರ್ಮಾನ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಸಮಸ್ಯೆಗಳನ್ನು ಸೃಷ್ಟಿ ಮಾಡಲು ಒಂದು ವರ್ಗ ಪ್ರಯತ್ನ ಮಾಡ್ತಾ ಇದೆ. ಯಾಕೆಂದರೆ ಸಮಸ್ಯೆ ಪರಿಹಾರವಾದರೆ ಯಾರೂ ಬರಲ್ಲ. ಆದರೆ ನನ್ನದು ಪೀಪಲ್ಸ್ ಪಾಲಿಟಿಕ್ಸ್. ಪವರ್ ಪಾಲಿಟಿಕ್ಸ್ ಅಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರೆ ಅದೇ ಜನರ ರಾಜಕೀಯ. ಅದೇ ನನ್ನದು ರಾಜಕೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಹೊಸ ತಾಲೂಕು ಸೌಧ ಕಟ್ಟಡದ ಪೀಠೋಪಕರಣಗಳಿಗೆ 2 ಕೋಟಿ ರೂಪಾಯಿ ಕೇಳಿದ್ದಾರೆ. ಅಲ್ಲದೆ ಹೊಸ ತಾಲೂಕಿನ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕೇಳಿದ್ದಾರೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದರು.
Chief Minister Basavaraj Bommai on Wednesday said that 24 hours in a day is not sufficient for him to work for the welfare of the state and hence he can’t be bothered by the accusations made by Opposition parties.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm