ಬ್ರೇಕಿಂಗ್ ನ್ಯೂಸ್
24-09-20 08:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 24: ಆಕೆಯದು ಸಣ್ಣ ವಯಸ್ಸಾದ್ರೂ ಕೊರೊನಾ ಲಾಕ್ಡೌನ್ ವೇಳೆಯನ್ನು ವೇಸ್ಟ್ ಮಾಡಿರಲಿಲ್ಲ. ಬಿಡುವಿನ ಸಮಯದಲ್ಲಿ ಹೊಲಿಗೆ ಕಲಿತ ಹುಡುಗಿ, ಮಾಸ್ಕ್ ತಯಾರಿಸಿ ದೇಶದ ಗಮನ ಸೆಳೆದಿದ್ದಾಳೆ. ಹೌದು.. ಕೋವಿಡ್-19 ತಡೆಗಟ್ಟುವ ಸಲುವಾಗಿ ತನ್ನ ಕೈಯಾರೆ ತಯಾರಿಸಿದ 300 ಮಾಸ್ಕ್ಗಳನ್ನು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಕಳುಹಿಸಿದ್ದ ಉಡುಪಿಯ ವಿದ್ಯಾರ್ಥಿನಿ ಈಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಗಮನ ಸೆಳೆದಿದ್ದಾಳೆ.
ಉಡುಪಿ ಅಂಬಲಪಾಡಿಯ ನಂದಿತಾ ಹಾಗೂ ಗಿರೀಶ್ ಆಚಾರ್ ದಂಪತಿಯ ಪುತ್ರಿ ಇಶಿತಾ ಆಚಾರ್(13) ಸಚಿವರ ಶ್ಲಾಘನೆಗೆ ಪಾತ್ರರಾಗಿರುವ ಬಾಲಕಿ. ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ರಕ್ಷಣಾ ಸಚಿವರ ಗಮನಸೆಳೆದ ಬಾಲಕಿ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಂಡಿರುವ ಇಶಿತಾ, ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಹೊಲಿಗೆಯನ್ನು ಕಲಿತುಕೊಂಡಿದ್ದಳು. ಬಿಡುವಿನ ವೇಳೆ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲೆಂದು 300 ಮಾಸ್ಕ್ ಗಳನ್ನು ಹೊಲಿದು ರೆಡಿ ಮಾಡಿದ್ದರು.
ಹೀಗೆ ಮಕ್ಕಳು ಹೊಲಿದ ಮಾಸ್ಕ್ಗಳನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡುವಂತಿಲ್ಲ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕ್ಗೆ ನೀಡಬೇಕಾಗುತ್ತದೆ. ಆದರೆ ಆಗಲೇ ಮಾಸ್ಕ್ ಬ್ಯಾಂಕ್ನಲ್ಲಿ ಬಹಳಷ್ಟು ಮಾಸ್ಕ್ಗಳು ಬಂದು ಸೇರಿದ್ದವು. ಹೀಗಾಗಿ, ಇಶಿತಾ ತನ್ನಲ್ಲಿದ್ದ ಮಾಸ್ಕ್ಗಳನ್ನು ಅಗತ್ಯವುಳ್ಳ ಬೇರೆಯವರಿಗೆ ನೀಡಲು ಮುಂದಾದರು. ಇದೇ ವೇಳೆ, ತನ್ನ ತಾಯಿಯ ಸ್ನೇಹಿತರೊಬ್ಬರು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಮಾಸ್ಕ್ ಕಳುಹಿಸಿಕೊಡಲು ಸಲಹೆ ಮಾಡಿದ್ದರು. ಅದರಂತೆ, ಇಶಿತಾ ಸುಮಾರು 300 ಮಾಸ್ಕ್ಗಳನ್ನು ರಕ್ಷಣಾ ಸಚಿವರ ಕಚೇರಿ ವಿಳಾಸಕ್ಕೆ ಕೊರಿಯರ್ ಮೂಲಕ ಕಳುಹಿಸಿದ್ದರು. ಬಾಲಕಿ ತೋರಿದ ದೇಶಪ್ರೇಮ ಹಾಗೂ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ತಿಂಗಳ ಬಳಿಕ ಕೇಂದ್ರ ರಕ್ಷಣಾ ಸಚಿವರ ಕಚೇರಿಯಿಂದ ಬಾಲಕಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿರುವ ಪತ್ರ ತಲುಪಿದ್ದು ವಿದ್ಯಾರ್ಥಿನಿ ಖುಷಿಯಾಗಿದ್ದಾಳೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am