ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm