ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm