ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm