ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm