ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm