ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm