ಬ್ರೇಕಿಂಗ್ ನ್ಯೂಸ್
16-05-22 06:30 pm Udupi Correspondent ಕರಾವಳಿ
ಉಡುಪಿ, ಮೇ 16 : ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧಾರ್ಮಿಕ ಕೇಂದ್ರಗಳು ಮಸೀದಿಗಳಾಗಿ ಪರಿವರ್ತನೆ ಆಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ. ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇರಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈಗ ಆಗುತ್ತಿರುವ ಸಮಾಜ ಪರಿವರ್ತನೆಯ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ. ಈಗ ಇದೊಂದು ರೀತಿಯ ಕಾಲಘಟ್ಟ. ಗ್ಯಾನವಾಪಿ ಮಸೀದಿ ಬಗ್ಗೆ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರಗಳನ್ನು ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೂ ಅವನ್ನು ಮುಸಲ್ಮಾನರಿಗೇ ಬಿಟ್ಟುಕೊಡಬೇಕು. ಯಾವುದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ.
ತಪ್ಪು ಆಗಿದ್ದರೆ ಅದು ತಪ್ಪೇ. ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಬಿಟ್ಟುಕೊಡಬೇಕು. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ಕೋರ್ಟ್ ವಿಧಿಸಿದ ನಿಯಮವನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದರು.
Temples been converted as Mosques is not good we don't accept it says Vishwaprasanna Tirtha of Pejawar Mutt.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm