ಬ್ರೇಕಿಂಗ್ ನ್ಯೂಸ್
16-05-22 06:30 pm Udupi Correspondent ಕರಾವಳಿ
ಉಡುಪಿ, ಮೇ 16 : ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧಾರ್ಮಿಕ ಕೇಂದ್ರಗಳು ಮಸೀದಿಗಳಾಗಿ ಪರಿವರ್ತನೆ ಆಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ. ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇರಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈಗ ಆಗುತ್ತಿರುವ ಸಮಾಜ ಪರಿವರ್ತನೆಯ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ. ಈಗ ಇದೊಂದು ರೀತಿಯ ಕಾಲಘಟ್ಟ. ಗ್ಯಾನವಾಪಿ ಮಸೀದಿ ಬಗ್ಗೆ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರಗಳನ್ನು ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೂ ಅವನ್ನು ಮುಸಲ್ಮಾನರಿಗೇ ಬಿಟ್ಟುಕೊಡಬೇಕು. ಯಾವುದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ.
ತಪ್ಪು ಆಗಿದ್ದರೆ ಅದು ತಪ್ಪೇ. ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಬಿಟ್ಟುಕೊಡಬೇಕು. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ಕೋರ್ಟ್ ವಿಧಿಸಿದ ನಿಯಮವನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದರು.
Temples been converted as Mosques is not good we don't accept it says Vishwaprasanna Tirtha of Pejawar Mutt.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm