ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm