ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm