ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm