ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm