ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm