ಬ್ರೇಕಿಂಗ್ ನ್ಯೂಸ್
20-05-22 12:05 pm Mangalore Correspondent ಕರಾವಳಿ
ಮಂಗಳೂರು, ಮೇ 20 : ನಾರಾಯಣ ಗುರುಗಳಂತಹ ದಾರ್ಶನಿಕರ ಬಗೆಗಿನ ಪಠ್ಯವನ್ನು ತೆಗೆದು ಹಾಕಿದ್ದು ಘೋರ ಅಪರಾಧ. ತೆಗೆದು ಹಾಕಿದ ಪಠ್ಯವನ್ನು ಮತ್ತೆ ಸೇರಿಸಬೇಕೆಂದು ನಾನು ಹೇಳುತ್ತಿಲ್ಲ. ಆದರೆ ಈ ಪ್ರಮಾದಕ್ಕಾಗಿ ನಾರಾಯಣ ಗುರುಗಳನ್ನು ಕುಲಗುರುಗಳೆಂದು ಹೇಳಿಕೊಳ್ಳುವ ಸಮುದಾಯಕ್ಕೆ ಸೇರಿದ ಕರಾವಳಿಯ ಇಬ್ಬರು ನಾಯಕರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಸಮುದಾಯದ ಪರವಾಗಿ ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬೇರೆ ಬೇರೆ ಪಕ್ಷಗಳ ಕಾರ್ಯಕರ್ತರು, ನಾಯಕರಿಗೆ ಬೇರೆ ಬೇರೆಯದೇ ಆದ ವ್ಯಕ್ತಿಗಳು ಆದರ್ಶರಾಗಿರಬಹುದು. ಗೋಡ್ಸೆ, ಗಾಂಧಿ ಅಭಿಮಾನಿಗಳು ಇರಬಹುದು. ಒಂದು ಸಂಘಟನೆಯ ಮುಖ್ಯಸ್ಥ ಹೆಡಗೇವಾರ್ ಬಗ್ಗೆ ಅಭಿಮಾನ ಇರಬಹುದು. ಯಾರು ಬೇಕಾದರೂ ಪ್ರಚಾರ ಸಭೆಯಲ್ಲಿ ಗೋಡ್ಸೆ, ಹೆಡಗೇವಾರ್ ಆದರ್ಶ ಎಂದು ಹೇಳಿಕೊಳ್ಳಬಹುದು. ಅದಕ್ಕೆ ನಮ್ಮ ಆಕ್ಷೇಪವಿಲ್ಲ.
ಆದರೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬಣ್ಣಿತವಾಗಿರುವ ಕರ್ನಾಟಕದಲ್ಲಿ ಒಬ್ಬ ದಾರ್ಶನಿಕ ವ್ಯಕ್ತಿಗೆ ಅಪಮಾನ ಆಗುವುದು ಆಗಬಾರದಿತ್ತು. ದಾರ್ಶನಿಕ ವ್ಯಕ್ತಿಗಳಿಗೆ ಅಪಮಾನ ಮಾಡುವುದು ಘೋರ ಅಪರಾಧ. ಇದರ ಹಿಂದಿನ ದುರುದ್ದೇಶ ಏನೆನ್ನುವುದು ತಿಳಿಯುತ್ತದೆ. ಇದು ಒಂದು ರೀತಿಯ ರಾಜಕೀಯ ಗಿಮಿಕ್. ಪಿಟ್ಟಿ ಪಾಲಿಟಿಕ್ಸ್ ಅಂತ ಹೇಳಬೇಕಷ್ಟೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ಒಪ್ಪುವುದಾದರೆ ಮಂಗಳೂರಿನ ರೈಲು ನಿಲ್ದಾಣ ಅಥವಾ ಏರ್ಪೋರ್ಟ್ ಗೆ ಅವರ ಹೆಸರು ಇಡಬೇಕಿತ್ತು. ಚುನಾವಣೆ ನೆಪದಲ್ಲಿ ಏನೋ ಹೆಸರು ಬದಲಾವಣೆ ಮಾಡಬಹುದು. ಆದರೆ ಇದರ ಹಿಂದಿನ ನೀತಿ ಏನು ಎನ್ನುವುದು ತಿಳಿಯ ಬೇಕಾಗುತ್ತದೆ. ನಾರಾಯಣ ಗುರುಗಳ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಒಬ್ಬ ಮಂತ್ರಿ ಹೇಳುತ್ತಾರೆ. ಆದರೆ ಈ ವಿಚಾರವನ್ನು ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಲ್ಲ. ಪ್ರತಿಷ್ಠಿತ ಪತ್ರಿಕೆಗಳು, ಚಿಂತಕರು ಪ್ರಶ್ನೆ ಎತ್ತಿರುವುದು. ಹಾಗಾಗಿ ಉತ್ತರ ಕೊಡಬೇಕಾಗುತ್ತದೆ ಎಂದು ರೈ ಹೇಳಿದರು.
ಪಠ್ಯ ಪುಸ್ತಕ ಮರು ಪರಿಷ್ಕರಣಾ ಸಮಿತಿಯ ಬಗ್ಗೆಯೇ ಆಕ್ಷೇಪ ಇದೆ. ದಾರ್ಶನಿಕ ವ್ಯಕ್ತಿಗಳ ಹೆಸರು, ಅವರ ವಿಚಾರಗಳನ್ನು ಪಠ್ಯದಿಂದ ತೆಗೆದು ಹಾಕುವುದರ ಹಿಂದಿನ ಅಜೆಂಡಾ ಅರ್ಥ ಮಾಡಬೇಕಾಗುತ್ತದೆ. ಏನೇ ರಾಜಕೀಯ ಇರಲಿ, ಬಿಲ್ಲವ, ಈಡಿಗರ ಪಾಲಿನ ಗುರುಗಳಿಗಾದ ಅವಮಾನಕ್ಕಾಗಿ ಅವರನ್ನು ಪ್ರತಿನಿಧಿಸುವ ನಾಯಕರು ರಾಜಿನಾಮೆ ನೀಡಬೇಕು ಎಂದು ಪರೋಕ್ಷವಾಗಿ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಹೆಸರೇಳದೆ ರಮಾನಾಥ ರೈ ರಾಜಿನಾಮೆಗೆ ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್ ಮತ್ತಿತರರಿದ್ದರು.
Mangalore Text on Narayana Guru, Periyar removed from class 10 Ramanath Rai slams BJP.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm