ಬ್ರೇಕಿಂಗ್ ನ್ಯೂಸ್
20-05-22 08:05 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 20 : ಬೆಳ್ತಂಗಡಿ ಶಾಸಕ ಹರೀಶ ಪೂಂಜ ಗೋಣಿ ಚೀಲದಲ್ಲಿ ಹಣ ತರುತ್ತಾರೆ. ಶಾಸಕರ ಕಚೇರಿ, ಮನೆಗೆ ಬಂದವರಿಗೆ ಲಕ್ಷಾಂತರ ರೂಪಾಯಿ ಹಣವನ್ನು ನೀಡುತ್ತಾರೆ ಎಂದು ಹೇಳಿ ಬೆಳ್ತಂಗಡಿ ಶಾಸಕರನ್ನು ಹೊಗಳುವ ಬಿಜೆಪಿ ಕಾರ್ಯಕರ್ತನ ಭಾಷಣ ವೈರಲ್ ಆಗಿದ್ದು ಶಾಸಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಈ ವಿಡಿಯೋ ಆಧರಿಸಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿಯ ಕಮ್ಯುನಿಸ್ಟ್ ಕಾರ್ಯಕರ್ತನೊಬ್ಬ ಇಡಿ ಮತ್ತು ಎಸಿಬಿಗೆ ದೂರು ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತ ಶೇಖರ್ ಲಾಯ್ಲ ಎಂಬವರು ಪ್ರಿವೆನ್ಷನ್ ಆಫ್ ಮನಿ ಲಾಂಡ್ರಿಂಗ್ ಆಕ್ಟ್ ಕಾಯ್ದೆಯ ಕಲಂ ಮೂರರ ಅಡಿಯಲ್ಲಿ ದೂರು ದಾಖಲಿಸಬೇಕು ಎಂದು ಕೋರಿದ್ದಾರೆ.

ಬೆಳ್ತಂಗಡಿಯ ಬಳಂಜ ಗ್ರಾಮದ ನಾರಾಯಣಗುರು ಸಭಾಭವನದಲ್ಲಿ ಇತ್ತೀಚೆಗೆ ಭಜನಾ ಸ್ಪರ್ಧೆಯ ಸಮಾರೋಪದಲ್ಲಿ ಭಾಗವಹಿಸಿದ ಹರೀಶ್ ಪೂಂಜಾ ಅವರನ್ನು ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಎಂಬವರು ಹೊಗಳಿ ಭಾಷಣ ಮಾಡಿದ್ದಾರೆ. ಶಾಸಕ ಹರೀಶ್ ಪೂಂಜರ ಮನೆಗೆ ಹೋಗಿದ್ದಾಗ, ಸಹಾಯ ಕೇಳಿ ಬಂದ ಮಹಿಳೆಗೆ ಶಾಸಕರು ಮನೆಯ ಒಳಗಿಂದ 10,000 ರೂ. ಹಣವನ್ನು ತಂದು ಕೊಟ್ಟಿದ್ದಾರೆ. ನಂತರ ಬಳಂಜದ ಇನ್ನೊಬ್ಬ ವ್ಯಕ್ತಿಗೂ 10 ಸಾವಿರ ರೂಪಾಯಿ ಕೊಟ್ಟಿದ್ದರು. ಶಾಸಕರ ಕಚೇರಿ ಶ್ರಮಿಕಕ್ಕೆ ಹೋಗಿದ್ದಾಗಲೂ ಚೀಲದಲ್ಲಿ ದೊಡ್ಡ ಮೊತ್ತದ ಹಣವನ್ನು ತಂದು ಕೊಡುತ್ತಾರೆ. ನಾನು ನೋಡಿದ ಸತ್ಯವನ್ನು ಹೇಳುತ್ತಿದ್ದೇನೆ. ಹಿಂದೆಂದೂ ಬೇರೆ ಯಾವುದೇ ಶಾಸಕರು ಇಷ್ಟೊಂದು ಉದಾರಿಯಾಗಿ ಹಣವನ್ನು ನೀಡುತ್ತಿರಲಿಲ್ಲ. ಅಭಿವೃದ್ಧಿ ಕಾರ್ಯವನ್ನೂ ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಚೀಲದಲ್ಲಿ ಹಣ ತರುತ್ತಿರುವ ಕುರಿತು ಹೇಳಿಕೆ ನೀಡಿರುವುದರಿಂದ ಹಣದ ಮೂಲ ಬಹಿರಂಗವಾಗಬೇಕು. ಹೀಗಾಗಿ ಶಾಸಕರ ಕಚೇರಿ ಹಾಗೂ ಮನೆಯನ್ನು ಶೋಧ ನಡೆಸಬೇಕು. ಪ್ರಧಾನಿ ಮೋದಿ ನೋಟು ಅಮಾನ್ಯೀಕರಣ ಮಾಡಿದ ಬಳಿಕ ಅಗತ್ಯಕ್ಕಿಂತ ಹೆಚ್ಚು ಹಣವನ್ನು ಇಟ್ಟುಕೊಳ್ಳುವಂತಿಲ್ಲ. ಆದರೆ ಇಲ್ಲಿನ ಶಾಸಕರು ಇಷ್ಟೊಂದು ಹಣವನ್ನು ಹೇಗೆ ಇಟ್ಟುಕೊಂಡಿದ್ದಾರೆ ಎಂದು ಶೇಖರ್ ಲಾಯ್ಲ ಪ್ರಶ್ನೆ ಮಾಡಿದ್ದಾರೆ.
Belthangady MLA Harish Poonja gets money to home in Gunny Bags, speech video goes viral. A speech made a BJP member stating Harish Poonja also shares his money to his associates in lakhs goes viral. A case has been filed to the ACB against MLA by Communist party secretary Shekar Laila.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm