ಬ್ರೇಕಿಂಗ್ ನ್ಯೂಸ್
26-09-20 09:19 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ಹತ್ತಿಕ್ಕಲು ಸೂಕ್ತ ಕಾನೂನು ರೂಪಿಸಿ ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸುತ್ತಿದೆ. ಇದರ ಅಂಗವಾಗಿ ಶನಿವಾರ ಬಂಟ್ವಾಳ ಶಾಖೆ ವತಿಯಿಂದ ಬಿ.ಸಿ.ರೋಡು ಹಾಗೂ ಸಿದ್ದಕಟ್ಟೆಯ ಅಂಚೆ ಕಚೇರಿ ಬಳಿ ಪತ್ರ ಚಳುವಳಿ ನಡೆಸಲಾಯಿತು.
ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಹೆಚ್ಚು ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕಬೇಕಿದೆ. ಅದಕ್ಕಾಗಿ ರಾಜ್ಯ ಸರಕಾರ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ಧ ಸಮರ ಸಾರಬೇಕೆಂದು ಎಬಿವಿಪಿ ಪತ್ರ ಚಳುವಳಿ ಮೂಲಕ ಆಗ್ರಹಿಸಿತು.

ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅಧ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ , ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm