ಬ್ರೇಕಿಂಗ್ ನ್ಯೂಸ್
26-09-20 09:19 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ಹತ್ತಿಕ್ಕಲು ಸೂಕ್ತ ಕಾನೂನು ರೂಪಿಸಿ ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸುತ್ತಿದೆ. ಇದರ ಅಂಗವಾಗಿ ಶನಿವಾರ ಬಂಟ್ವಾಳ ಶಾಖೆ ವತಿಯಿಂದ ಬಿ.ಸಿ.ರೋಡು ಹಾಗೂ ಸಿದ್ದಕಟ್ಟೆಯ ಅಂಚೆ ಕಚೇರಿ ಬಳಿ ಪತ್ರ ಚಳುವಳಿ ನಡೆಸಲಾಯಿತು.
ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಹೆಚ್ಚು ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕಬೇಕಿದೆ. ಅದಕ್ಕಾಗಿ ರಾಜ್ಯ ಸರಕಾರ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ಧ ಸಮರ ಸಾರಬೇಕೆಂದು ಎಬಿವಿಪಿ ಪತ್ರ ಚಳುವಳಿ ಮೂಲಕ ಆಗ್ರಹಿಸಿತು.
ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅಧ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ , ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm