ಬ್ರೇಕಿಂಗ್ ನ್ಯೂಸ್
20-05-22 08:52 pm Mangalore Correspondent ಕರಾವಳಿ
ಮಂಗಳೂರು, ಮೇ 20 : ನಾರಾಯಣ ಗುರು ಹೆಸರಲ್ಲಿ ಕಾಂಗ್ರೆಸ್ ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದೆ. ಹತ್ತನೇ ತರಗತಿ ಪಠ್ಯ ಇನ್ನೂ ಮುದ್ರಿತವಾಗಿ ಹೊರಗೆ ಬಂದಿಲ್ಲ. ಪಠ್ಯದ ಪಿಡಿಎಫ್ ಪ್ರತಿಯನ್ನು ಮುಂದಿಟ್ಟು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡಬಾರದು. ಪುಸ್ತಕ ಮುದ್ರಣಗೊಂಡು ಹೊರಬರಲಿ. ಆಬಳಿಕ ಪುಸ್ತಕ ನೋಡಿಕೊಂಡು ಮಾತನಾಡಲಿ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಹಿಂದೆ ಬರಗೂರು ರಾಮಚಂದ್ರಪ್ಪ ಇದ್ದಾಗ ನಮ್ಮ ಗೋವಿಂದ ಪೈ ಹೆಸರನ್ನು ಪಠ್ಯದಿಂದ ಕೈಬಿಟ್ಟಿದ್ದರು. ಯಾರೂ ಮಾತನಾಡಿಲ್ಲ. ನಾವು ಅವರನ್ನು ಪಠ್ಯಕ್ಕೆ ಸೇರಿಸಿದ್ದೇವೆ. ಕೆ.ಟಿ ಗಟ್ಟಿ, ಪಂಜೆ ಮಂಗೇಶರಾಯರು, ಶಿವಾನಂದ ಕಳವೆ ಅವರ ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿದ್ದೇವೆ. ಪ್ರಧಾನಿ ಮೋದಿಯವರ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮಕ್ಕಳ ಬೆಳವಣಿಗೆಗೆ ಪೂರಕವಾದ ನೈಜ ಇತಿಹಾಸ ಹೇಳುತ್ತೇವೆ. ನಾಡು ಬೆಳಗಿದ ಮಹನೀಯರ ಬಗ್ಗೆ ಪಠ್ಯ ಕೊಟ್ಟಿದ್ದೇವೆ.
ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ ಅನ್ನುವುದು ಗುಲಾಮಗಿರಿಯ ಸಂಕೇತ ಎನ್ನುವಂತೆ ಪಠ್ಯದಲ್ಲಿ ತೋರಿಸಿದ್ದರು. ನೈಜ ಇತಿಹಾಸವನ್ನು ಮರೆಮಾಚಿ ಮೊಘಲರನ್ನು ವೈಭವೀಕರಿಸಿದ್ದು ನೋಡಿದ್ದೇವೆ. ಅಂತಹ ತಪ್ಪುಗಳನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ.

ಏಳನೇ ಮತ್ತು ಹತ್ತನೇ ತರಗತಿ ಪಠ್ಯದಲ್ಲಿ ನಾರಾಯಣ ಗುರುಗಳ ಬಗ್ಗೆ ಪಠ್ಯ ಇರಲಿದೆ. ಪುಸ್ತಕ ಇನ್ನೂ ಮುದ್ರಣಗೊಂಡು ಬಂದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕಳೆದ ಬಾರಿ ಟ್ಯಾಬ್ಲೋ ವಿಚಾರದಲ್ಲೂ ನಾರಾಯಣ ಗುರುಗಳನ್ನು ಬೀದಿಗೆ ತಂದು ನಿಲ್ಲಿಸಿದ್ದರು. ನಾರಾಯಣ ಗುರುಗಳ ಬಗ್ಗೆ ಗೌರವ ಕೊಡುವುದನ್ನು ಕಾಂಗ್ರೆಸಿನಿಂದ ಕಲಿಯಬೇಕಿಲ್ಲ. ಸ್ವಾತಂತ್ರ್ಯ ಸಿಗುವ ಮೊದಲೇ ಆರೆಸ್ಸೆಸ್ 1925 ರಲ್ಲಿ ಸ್ಥಾಪನೆಗೊಂಡಾಗಲೇ ನಾರಾಯಣ ಗುರುಗಳನ್ನು ದಿನವೂ ಸ್ಮರಿಸುವ ಕೆಲಸ ಮಾಡುತ್ತಾ ಬಂದಿದೆ. ಪ್ರಧಾನಿ ಮೋದಿಯವರೇ ಗುರುಗಳಿಗೆ ವಿಶೇಷ ಗೌರವ ಕೊಟ್ಟಿದ್ದಾರೆ. ಕಾಂಗ್ರೆಸಿಗರು ಹತಾಶ ಭಾವದಿಂದ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸುದರ್ಶನ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಜಗದೀಶ ಶೇಣವ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ರಣದೀಪ ಕಾಂಚನ್ ಇದ್ದರು.
"As Congress is facing an identity crisis in the state withouy any issues, Congress is unnecessarily dragging the name of Narayana Guru claiming that the government has failed to include Narayana Guru's name in 10th textbook," said BJP district president Sudarshan Moodabidre. He was addressing a press meet at Atal Seva Kendra here on Friday, May 20.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm