ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm