ಬ್ರೇಕಿಂಗ್ ನ್ಯೂಸ್
08-08-22 02:58 pm Source: Vijayakarnataka ಕ್ರೀಡೆ
ಲೌಡರ್ಹಿಲ್ (ಪ್ಲೋರಿಡಾ): ಆತಿಥೇಯ ವೆಸ್ಟ್ ಇಂಡೀಸ್ ಎದುರು ಅಧಿಕಾರಯುತ ಆಟವಾಡಿದ ಟೀಮ್ ಇಂಡಿಯಾ, ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ 4-1 ಅಂತರದ ಜಯ ದಾಖಲಿಸಿದ. ಭಾನುವಾರ ನಡೆದ ಸರಣಿಯ 5ನೇ ಹಾಗೂ ಅಂತಿಮ ಪಂದ್ಯದಲ್ಲಿ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಕೊಟ್ಟು, ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಮುನ್ನಡೆಸಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 88 ರನ್ಗಳ ಭರ್ಜರಿ ಗೆಲುವು ತಂದುಕೊಟ್ಟರು.
ಅಂದಹಾಗೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತ ಟಿ20 ಕ್ರಿಕೆಟ್ ತಂಡ ಗೆದ್ದ ಮೂರನೇ ಪಂದ್ಯ ಇದಾಗಿದೆ. ಕಳೆದ ತಿಂಗಳು ಐರ್ಲೆಂಡ್ ವಿರುದ್ಧ ನಡೆದ ಎರಡು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹಾರ್ದಿಕ್ 2-0 ಅಂತರದ ಜಯ ತಂದಿದ್ದರು. ಇದೀಗ ವಿಂಡೀಸ್ ವಿರುದ್ಧ ಕೊನೇ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ತೆಗೆದುಕೊಂಡ ಕಾರಣ ಭಾರತ ತಂಡವನ್ನು ಮುನ್ನಡೆಸಿ ಮತ್ತೊಂದು ಯಶಸ್ಸು ತಂದುಕೊಟ್ಟಿದ್ದಾರೆ.ಈ ಗೆಲುವಿನ ಬಳಿಕ ಮಾತನಾಡಿದ ಹಂಗಾಮಿ ನಾಯಕ ಹಾರ್ದಿಕ್, ಪೂರ್ಣ ಪ್ರಮಾಣದಲ್ಲಿ ನಾಯಕತ್ವ ಸಿಕ್ಕರೆ ತಮಗೆ ಬಹಳಾ ಸಂತೋಷ ಎಂದು ಹೇಳಿಕೊಂಡಿದ್ದಾರೆ.
"ಖಂಡಿತಾ, ಯಾಕಾಗಬಾರದು? ಭವಿಷ್ಯದಲ್ಲಿ ನನಗೆ ಪೂರ್ಣ ಪ್ರಮಾಣದ ಕ್ಯಾಪ್ಟನ್ ಆಗಿ ಆಡುವ ಅವಕಾಶ ಸಿಕ್ಕರೆ ಖಂಡಿತಾ ಅತೀವ ಸಂತಸವಾಗಲಿದೆ. ಸದ್ಯ ನಮ್ಮೆದುರು ವಿಶ್ವಕಪ್ ಇದೆ. ಏಷ್ಯಾ ಕಪ್ ಕೂಡ ಹತ್ತಿರದಲ್ಲೇ ಇದೆ. ಈ ಬಗ್ಗೆ ಗಮನ ನೀಡಿ ನಮ್ಮ ಪ್ರದರ್ಶನ ಕಾಯ್ದುಕೊಳ್ಳುವ ಕಡೆಗೆ ಎದುರು ನೋಡುತ್ತಿದ್ದೇನೆ. ನಮ್ಮ ಸಾಮರ್ಥ್ಯವನ್ನು ಉತ್ತಮ ಪಡಿಸಿಕೊಳ್ಳುವ ಕಡೆಗೆ ಗಮನ ನೀಡುತ್ತಿದ್ದೇವೆ," ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ ಎಂದು ಕ್ರಿಕ್ಇನ್ಫೋ ವರದಿ ಮಾಡಿದೆ.
ಸರಣಿ ಗೆಲುವಿನ ಬಳಿಕ ಮಾತನಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ, ಭವಿಷ್ಯದಲ್ಲಿ ಭಾರತ ತಂಡದಲ್ಲಿ 10 ಕ್ಯಾಪ್ಟನ್ಗಳನ್ನು ಕಾಣಬಹುದು ಎಂದು ಹೇಳಿದ್ದಾರೆ. "ತಂಡವೊಂದರಲ್ಲಿ ಇಷ್ಟು ಜನ ನಾಯಕರು ಇರುವುದು ಬಹಳಾ ಉತ್ಸುಕತೆ ತಂದುಕೊಡುತ್ತದೆ. ನಮ್ಮ ಬೆನ್ನಿಗೆ ಐಪಿಎಲ್ ಇದೆ. ಅಲ್ಲಿ 10 ತಂಡಗಳಿವೆ. ಆ ಹತ್ತೂ ತಂಡಗಳಲ್ಲಿ ಇರುವ ನಾಯಕರು ಭಾರತ ತಂಡದಲ್ಲಿ ಆಡುವ ಸಾಧ್ಯತೆ ಇದೆ. ಇದು ನಿಜಕ್ಕೂ ಅದ್ಭುತ ಸಂಗತಿ. ಇವೆರೆಲ್ಲರಿಗೂ ನಾಯಕತ್ವದ ಜವಾಬ್ದಾರಿ ಬಗ್ಗೆ ಅರಿವಿದ್ದರೆ ನನ್ನ ಕ್ಯಾಪ್ಟನ್ಸಿಯೂ ಸುಲಭವಾಗುತ್ತದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಅಂದಹಾಗೆ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಈ ವರ್ಷ ಟೀಮ್ ಇಂಡಿಯಾ ಒಟ್ಟಾರೆ 8 ಕ್ಯಾಪ್ಟನ್ಗಳನ್ನು ಬಳಕೆ ಮಾಡಿಕೊಂಡಿದೆ. ಆಟಗಾರರ ಮೇಲಿನ ಹೊರೆ ನಿರ್ವಹಣೆ ಮತ್ತು ಗಾಯದ ಸಮಸ್ಯೆಗಳ ಕಾರಣ ಭಾರತ ತಂಡದ ಕ್ಯಾಪ್ಟನ್ಸಿಯಲ್ಲಿ ಸತತ ಬದಲಾವಣೆ ಆಗಿದೆ. ಇನ್ನು ಐಪಿಎಲ್ 2022 ಟೂರ್ನಿಯಲ್ಲಿ ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿ ಟ್ರೋಫಿ ಗೆದ್ದುಕೊಟ್ಟ ಹಾರ್ದಿಕ್ ಪಾಂಡ್ಯಗೆ ಇದೀಗ ಭಾರತ ತಂಡವನ್ನು ಮುನ್ನಡೆಸುವ ಅವಕಾಶವೂ ಸಿಕ್ಕಿದೆ.
Ind Vs Wi I Will Be More Than Happy To Gey Full Time Captaincy Says Hardik Pandya.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm