Zimbabwe Vs India 1st Odi Live Cricket Score Toss Latest Update Playing11 From Harare Sports Club.
">ಬ್ರೇಕಿಂಗ್ ನ್ಯೂಸ್
18-08-22 01:32 pm Source: Vijayakarnataka ಕ್ರೀಡೆ
ಹರಾರೆ: ಆತಿಥೇಯ ಜಿಂಬಾಬ್ವೆ ಎದುರು ಏಕದಿನ ಕ್ರಿಕೆಟ್ ಸರಣಿಯನ್ನು ವೈಟ್ವಾಶ್ ಮಾಡುವ ಗುರಿ ಹೊಂದಿರುವ ಟೀಮ್ ಇಂಡಿಯಾ, ಇಲ್ಲಿನ ಹರಾರೆ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡುವ ನಿರ್ಧಾರ ಮಾಡಿದೆ.
ಕೆ.ಎಲ್ ರಾಹುಲ್ ಭಾರತ ತಂಡವನ್ನು ಎರಡನೇ ಸರಣಿಯಲ್ಲಿ ಮುನ್ನಡೆಸುತ್ತಿದ್ದಾರೆ. ನಿರೀಕ್ಷೆಯಂತೆ ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರಿಗೆ ಅವಕಾಶ ನೀಡಿದ್ದು, ಯುವ ತಾರೆ ಶುಭಮನ್ ಗಿಲ್ ಅವರಿಗೂ ಅವಕಾಶ ಕೊಟ್ಟಿದ್ದಾರೆ. ವೇಗದ ಬೌಲಿಂಗ್ ಸಲುವಾಗಿ ದೀಪಕ್ ಚಹರ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿಧ್ ಕೃಷ್ಣ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಲ್ರೌಂಡರ್ಗಳಾದ ದೀಪಕ್ ಹೂಡ ಮತ್ತು ಅಕ್ಷರ್ ಪಟೇಲ್ ಇದ್ದಾರೆ. ಏಕೈಕ ಪರಿಣತ ಸ್ಪಿನ್ನರ್ ಆಗಿ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕಣಕ್ಕಿಳಿದಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ ಇಲೆವೆನ್ ವಿವರ
ಟೀಮ್ ಇಂಡಿಯಾ XI: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್ (ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಅಕ್ಷರ್ ಪಟೇಲ್, ದೀಪಕ್ ಚಹರ್, ಕುಲ್ದೀಪ್ ಯಾದವ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ XI: ತಡಿವನಾಶೆ ಮರುಮಾನಿ, ಇನೋಸೆಂಟ್ ಕಾಯಿಯ, ಶೇನ್ ವಿಲಿಯಮ್ಸ್, ವೆಸ್ಲೀ ಮೆಢೆವರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ವಿಕೆಟ್ಕೀಪರ್/ ಕ್ಯಾಪ್ಟನ್), ರಯಾನ್ ಬರ್ಲ್, ಲೂಕ್ ಜಾಂಗ್ವೀ, ಬ್ರಾಡ್ ಈವನ್ಸ್, ವಿಕ್ಟರ್ ಯಾವುಚಿ, ರಿಚರ್ಡ್ ಗರಾವ.
ತಂಡಗಳ ವಿವರ
ಭಾರತ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
ಜಿಂಬಾಬ್ವೆ: ರೇಗಿಸ್ ಚಕಾಬ್ವ (ನಾಯಕ), ತನಕ ಚಿವಾಂಗ, ಬ್ರಾಡ್ಲೀ ಈವನ್ಸ್, ಲೂಕ್ ಜಾಂಗ್ವೀ, ರಯಾನ್ ಬರ್ಲ್, ಇನೋಸೆಂಟ್ ಕಾಯಿಯ, ಕಾಯ್ತಾನೊ ತಕುಡ್ವಾನ್ಷೆ, ಕ್ಲೈವ್ ಮಡಾಂಡೆ, ವೆಸ್ಲೀ ಮೆಢೆವರ್, ತಡಿವನಾಶೆ ಮರುಮಾನಿ, ಜಾನ್ ಮಸಾರ, ಟೋನಿ ಮುನ್ಯೋಂಗ, ರಿಚರ್ಡ್ ಗರಾವ, ವಿಕ್ಟರ್ ಯಾವುಚಿ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ.
Zimbabwe Vs India 1st Odi Live Cricket Score Toss Latest Update Playing11 From Harare Sports Club.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm