ಬ್ರೇಕಿಂಗ್ ನ್ಯೂಸ್
02-09-22 03:54 pm Source: Vijayakarnataka ಕ್ರೀಡೆ
ಬೆಂಗಳೂರು: ಏಷ್ಯಾ ಕಪ್ 2022 ಟೂರ್ನಿಯ ವೇಳಾಪಟ್ಟಿ ಪ್ರಕಾರ 'ಎ' ಗುಂಪಿನಲ್ಲಿ ಮೊದಲ ಎರಡು ಸ್ಥಾನ ಪಡೆಯುವ ತಂಡಗಳು ಸೆಪ್ಟೆಂಬರ್ 4ರಂದು (ಭಾನುವಾರ) ಮತ್ತೆ ಮುಖಾಮುಖಿ ಆಗುವಂತ್ತಾಗುತ್ತದೆ. ಸದ್ಯ ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ, 'ಎ' ಗುಂಪಿನಲ್ಲಿ ಅಗ್ರ ಸ್ಥಾನ ಪಡೆದು ಸೂಪರ್-4 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. 'ಎ' ಗುಂಪಿನ ಎರಡನೇ ಸ್ಥಾನಕ್ಕಾಗಿ ಪಾಕಿಸ್ತಾನ ಮತ್ತು ಹಾಂಕಾಂಗ್ ತಂಡಗಳ ನಡುವೆ ಪೈಪೋಟಿಯಿದೆ. ಸೆ.2ರಂದು (ಶುಕ್ರವಾರ) ಪಾಕಿಸ್ತಾನ-ಹಾಂಕಾಂಗ್ ತಂಡಗಳು ಮುಖಾಮುಖಿ ಆಗಲಿದ್ದು, ಪಾಕ್ ತಂಡ ಗೆಲ್ಲುವ ಫೇವರಿಟ್ ಆಗಿದೆ.
ಕ್ರಿಕೆಟ್ ಕೂಸು ಹಾಂಕಾಂಗ್ ಎದುರು ಪಾಕಿಸ್ತಾನ ತಂಡ ಗೆದ್ದದ್ದೇ ಆದರೆ, ಭಾನುವಾರ (ಸೆ.4) ನಡೆಯಲಿರುವ ಸೂಪರ್-4 ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾ ಸವಾಲು ಎದುರಿಸಲಿದೆ. ಅಂದಹಾಗೆ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 5 ವಿಕೆಟ್ಗಳ ಜಯ ದಾಖಲಿಸಿತ್ತು. ಆದರೆ, ಹಾಂಕಾಂಗ್ ತಂಡ ಪಾಕ್ ಎದುರು ಅಚ್ಚರಿಯ ಗೆಲುವು ದಾಖಲಿಸಿದ್ದೇ ಆದರೆ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಲಿದೆ. ಶಾರ್ಜಾ ಕ್ರೀಡಾಂಗಣದಲ್ಲಿ ಹಾಂಕಾಂಗ್ ಮತ್ತು ಪಾಕಿಸ್ತಾನ ತಂಡಗಳು ಶುಕ್ರವಾರ ರಾತ್ರಿ 7:30ಕ್ಕೆ ಮುಖಾಮುಖಿ ಆಗಲಿವೆ.
ಇಂಡೊ-ಪಾಕ್ ಫೈನಲ್ ಹೇಗೆ?
ಸೂಪರ್-4 ಹಂತ ತಲುಪುವ ಎಲ್ಲಾ ತಂಡಗಳು ಕನಿಷ್ಠ ಮೂರು ಪಂದ್ಯಗಳನ್ನು ಆಡಲಿವೆ. ಹೀಗಾಗಿ ಫೈನಲ್ ತಲುಪುವ ಫೇವರಿಟ್ಗಳಾದ ಭಾರತ-ಪಾಕಿಸ್ತಾನ ತಂಡಗಳು ಸೂಪರ್-4 ಹಂತದಕಲ್ಲಿ ಮತ್ತೊಮ್ಮೆ ಮುಖಾಮುಖಿಗೆ ಸಿದ್ಧವಾಗಬೇಕಾಗುತ್ತದೆ. ಈ ಪಂದ್ಯ ಫೈನಲ್ಗೂ ಮುನ್ನ ಇತ್ತಂಡಗಳಿಗೆ ಸಮರಾಭ್ಯಾಸದ ಪಂದ್ಯದಂತ್ತಾಗಲಿದೆ. ಆದರೆ, ಇದು ಸಾಧ್ಯವಾಗಬೇಕಾದರೆ ಪಾಕಿಸ್ತಾ ತಂಡ 'ಎ' ಗುಂಪಿನ ಕೊನೇ ಪಂದ್ಯದಲ್ಲಿ ಹಾಂಕಾಂಗ್ ಎದುರು ಗೆಲ್ಲಬೇಕಿದೆ.
ಪಾಕ್-ಹಾಂಕಾಂಗ್ ಮೊದಲ ಬಾರಿ ಮುಖಾಮುಖಿ
ಅಂದಹಾಗೆ, ಹಾಂಕಾಂಗ್ ತಂಡವನ್ನು ಸೋಲಿಸಲು ಪಾಕಿಸ್ತಾನಕ್ಕೆ ಯಾವುದೇ ತೊಂದರೆಯಾಗಬಾರದು. ಇನ್ನು ಇತ್ತಂಡಗಳು ಟಿ20 ಮಾದರಿಯಲ್ಲಿ ಮೊದಲ ಬಾರಿ ಮುಖಾಮುಖಿಯಾಗುತ್ತಿವೆ. ಇದಕ್ಕೂ ಮೊದಲು ಮೂರು ಬಾರಿ ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ ಪೈಪೋಟಿ ನಡೆಸಿದ್ದು, ಮೂರು ಬಾರಿ ಪಾಕ್ ಪಡೆ ಗೆದ್ದಿದೆ. ಹೀಗಾಗಿ ಟಿ20 ಕ್ರಿಕೆಟ್ನಲ್ಲೂ ಪಾಕ್ ಗೆಲ್ಲುವ ಫೇವರಿಟ್ ಆಗಿದೆ.
ಪಾಕಿಸ್ತಾನ ತಂಡದ ಸಂಭಾವ್ಯ ಪ್ಲೇಯಿಂಗ್ XI: ಬಾಬರ್ ಆಝಮ್ (ನಾಯಕ), ಮೊಹಮ್ಮದ್ ರಿಝ್ವಾನ್, ಫಖರ್ ಝಮಾನ್, ಇಫ್ತಿಖಾರ್ ಅಹ್ಮದ್, ಖುಷ್ದಿಲ್ ಶಾ, ಶದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಝ್, ಮೊಹಮ್ಮದ್ ಹಸನಾಯ್, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ.
ಹಾಂಗ್ ಕಾಂಗ್ ತಂಡದ ಸಂಭಾವ್ಯ XI: ನಿಝಾಕತ್ ಖಾನ್ (ನಾಯಕ), ಯಾಸಿಮ್ ಮೊರ್ತಾಜ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಝ್ ಖಾನ್, ಝೀಶನ್ ಅಲಿ, ಸ್ಕಾಟ್ ಮೆಕೆನಿ, ಹರೂನ್ ಅರ್ಷದ್, ಎಹಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಗಜ್ನಾಫರ್.
Asia Cup 2022 How Can India And Pakistan Face Each Other One More Time All Scenarios Explained.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm