ಬ್ರೇಕಿಂಗ್ ನ್ಯೂಸ್
20-10-22 01:42 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಸೂರ್ಯಕುಮಾರ್ ಯಾದವ್ ಸೇರ್ಪಡೆಯಾಗಿರುವುದರಿಂದ ಭಾರತ ಅತ್ಯಂತ ಬಲಿಷ್ಠವಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ 2021ರ ಆರಂಭದಲ್ಲಿ ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ಗಳ ಮೂಲಕ ರಾಷ್ಟ್ರೀಯ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಕೆ.ಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಗ್ರ ಕ್ರಮಾಂಕದಲ್ಲಿ ಬೇಗ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ತಂಡವನ್ನು ಮೇಲೆತ್ತುವ ಸಾಮರ್ಥ್ಯ ಸೂರ್ಯಕುಮಾರ್ ಯಾದವ್ಗೆ ಇದೆ.

ಇಲ್ಲಿಯವರೆಗೂ ಭಾರತ ತಂಡದ ಪರ 34 ಟಿ20 ಪಂದ್ಯಗಳಾಡಿರುವ ಸೂರ್ಯಕುಮಾರ್ ಯಾದವ್, 9 ಅರ್ಧಶತಕಗಳು ಹಾಗೂ ಒಂದು ಸೆಂಚುರಿ ಸೇರಿದಂತೆ 1000ಕ್ಕೂ ಹೆಚ್ಚಿನ ರನ್ಗಳನ್ನು ಸಿಡಿಸಿದ್ದಾರೆ. ಭಾರತ ತಂಡಕ್ಕೆ ಎಬಿ ಡಿವಿಲಿಯರ್ಸ್ ಸಿಕ್ಕಿದ್ದಾರೆಂದು ಸೂರ್ಯಕುಮಾರ್ ಯಾದವ್ ಅವರ 360 ಡಿಗ್ರಿ ಬ್ಯಾಟಿಂಗ್ ನೋಡಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಭಾರತ ತಂಡದ ಪರ ಕಳೆದ 10 ಇನಿಂಗ್ಸ್ಗಳಲ್ಲಿ ಹ್ಯಾಟ್ರಿಕ್ ಅರ್ಧಶತಕಗಳು ಸೇರಿದಂತೆ ಐದು ಅರ್ಧಶತಕಗಳನ್ನು ಅವರು ಸಿಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಹೈದರಾಬಾದ್ನಲ್ಲಿ ನಿರ್ಣಾಯಕ 69 ರನ್ ಸಿಡಿಸಿದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳಲ್ಲಿ ಅಜೇಯ 50 ರನ್ ಹಾಗೂ 22 ಎಸೆತಗಳಲ್ಲಿ 61 ರನ್ ಸಿಡಿಸಿದ್ದರು.
"ಸೂರ್ಯಕುಮಾರ್ ಯಾದವ್ ಸೇರ್ಪಡೆಯಾಗಿರುವುದರಿಂದ ಭಾರತ ತಂಡದ ಬ್ಯಾಟಿಂಗ್ ಬಲ ಇನ್ನಷ್ಟು ಬಲಿಷ್ಠವಾಗಿದೆ. ಯಾವುದೇ ಬೌಲರ್ ವಿರುದ್ಧ ದೊಡ್ಡ ರೇಂಜ್ ಶಾಟ್ಗಳನ್ನು ಹೊಡೆಯುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ. ಇವರ ಬ್ಯಾಟಿಂಗ್ನಲ್ಲಿ ಎಲ್ಲಾ ರೀತಿಯ ಶಾಟ್ಸ್ ಇವೆ. ಈ ಕಾರಣದಿಂದಾಗಿ ಅಗ್ರ ಕ್ರಮಾಂಕದ ಪಾತ್ರ ಬದಲಾಗಿದೆ. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಅವರು ಯಾವುದೇ ಒತ್ತಡವಿಲ್ಲದೆ ಫಿನಿಷರ್ ಪಾತ್ರವನ್ನು ನಿರ್ವಹಿಸಲಿದ್ದಾರೆ," ಎಂದು ಮಿಸ್ಬಾ ಉಲ್ ಹಕ್ ಹೇಳಿದರು.

"ಒಟ್ಟಾರೆಯಾಗಿ, ಕಳೆದ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡದ ಪ್ರವೃತ್ತಿ ಸಂಪೂರ್ಣ ಬದಲಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನ ತಂಡದ ತಂತ್ರವನ್ನು ಭಾರತ ಹೊಂದಿತ್ತು. ಆದರೆ, ಈಗ ಇಂಗ್ಲೆಂಡ್ ತಂಡದ ರೀತಿಯ ತಂತ್ರವನ್ನು ಭಾರತ ಅಳವಡಿಸಿಕೊಂಡಿದೆ. ಪವರ್ಪ್ಲೇನಲ್ಲಿ ಅವರು ಸಾಧ್ಯವಾದಷ್ಟು ಗರಿಷ್ಠ ರನ್ಗಳನ್ನು ಗಳಿಸುತ್ತಾರೆ. ಅದಕ್ಕೆ ತಕ್ಕಂತೆ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಹೊಂದಿಕೊಂಡಿದ್ದಾರೆ. ಇದರಿಂದಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿಯಾಗಿ ಆಡುವುದಕ್ಕೂ ಮುನ್ನ ಕ್ರೀಸ್ಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಲು ಸ್ವಲ್ಪ ಅವಕಾಶ ಸಿಕ್ಕಂತಾಗಿದೆ," ಎಂದು ಮಿಸ್ಬಾ ಉಲ್ ಹಕ್ ತಿಳಿಸಿದರು.
ಆಸ್ಟ್ರೇಲಿಯಾ ಆತಿಥ್ಯದಲ್ಲಿ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಈಗಾಗಲೇ ಆರಂಭವಾಗಿದ್ದು, ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.
T20 World Cup 2022 After Suryakumar Yadavs Inclusion, Indias Batting Strength Has Increased, Says Misbah Ul Haq.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm