ಬ್ರೇಕಿಂಗ್ ನ್ಯೂಸ್
30-12-22 01:25 pm Source: Vijayakarnataka ಕ್ರೀಡೆ
ಕಾರು ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಆರೋಗ್ಯದ ಬಗ್ಗೆ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಕ್ರಿಕೆಟಿಗನ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ ಗಾಬರಿ ಪಡಬೇಕಾದ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ ಸುಮಾರು 5:30ರ ಸಮಯದಲ್ಲಿ ದಿಲ್ಲಿಯಿಂದ ಉತ್ತರಾಖಂಡಗೆ ರಿಷಭ್ ಪಂತ್ ಒಬ್ಬರೆ ತಮ್ಮ ಬಿಎಂಡಬ್ಲ್ಯು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ದಿಲ್ಲಿ-ಡೆಹ್ರಾಡೂನ್ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಿಷಭ್ ಪಂತ್ ಕಾರಿನ ಬಾಗಿಲು ತೆಗೆದು ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್ ಪಂತ್ ಅವರನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹಾಗೂ ತದನಂತರ ಡೆಹ್ರಾಡೂನ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಂದಹಾಗೆ ಅಪಘಾತದಲ್ಲಿ ರಿಷಭ್ ಪಂತ್ ತಲೆ, ಬೆನ್ನು ಹಾಗೂ ಕಾಲಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ರಿಷಭ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಷಭ್ ಪಂತ್ ಗಾಯದ ಸ್ವರೂಪ ಹಾಗೂ ಅವರು ಸಂಪೂರ್ಣವಾಗಿ ಗುಣಮುಖರಾಗಲು ಇನ್ನೂ ಎಷ್ಟು ದಿನಗಳ ಬೇಕು ಎಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ.
ಭಾರತ ಕ್ರಿಕೆಟ್ ತಂಡದ ರಿಷಭ್ ಪಂತ್ ಅವರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಸಿಬ್ಬಂದಿಯ ವೀಕ್ಷಣೆಯಲ್ಲಿದ್ದಾರೆ. ಆದರೆ, ಅವರಿಗೆ ಯಾವುದೇ ಅಪಾಯ ಇಲ್ಲ ಎಂದು ಮ್ಯಾಕ್ಸ್ ಆಸ್ಪತ್ರೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ಖಚಿತಪಡಿಸಿದೆ.

"ಕ್ರಿಕೆಟಿಗ ರಿಷಬ್ ಪಂತ್ ಅವರು ಮೂಳೆಚಿಕಿತ್ಸಕರು ಮತ್ತು ಪ್ಲಾಸ್ಟಿಕ್ ಸರ್ಜನ್ಗಳ ವೀಕ್ಷಣೆಯಲ್ಲಿದ್ದಾರೆ. ಅವರ ಆರೋಗ್ಯ ಪರಸ್ಥಿತಿ ಸ್ಥಿರವಾಗಿದೆ. ವೈದ್ಯರು ರಿಷಭ್ ಪಂತ್ ಅವರನ್ನು ಪರೀಕ್ಷಿಸಿದ ಬಳಿಕ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಾಗುವುದು. ತದ ನಂತರ ಮುಂದಿನ ಹೆಜ್ಜೆಯನ್ನು ಇಡುತ್ತೇವೆ," ಎಂದು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆ ಆಶಿಶ್ ಯಾಗ್ನಿಕ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Rishabh Pant Accident Max Hospital Releases First Official Update On Rishabh Pant's Health After Freak Car Accident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm