ಬ್ರೇಕಿಂಗ್ ನ್ಯೂಸ್
17-01-23 01:20 pm Source: news18 ಕ್ರೀಡೆ
ಸದ್ಯ ಕಳೆದ 18 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್, ಇದೀಗ ತಮ್ಮ ಆರೋಗ್ಯದ ಕುರಿತು ತಾವೇ ಟ್ವೀಟ್ ಹಾಗೂ ಇನ್ಸ್ಸ್ಟಾ ಗ್ರಾಮ್ನಲ್ಲಿ ಮೆಸೇಜ್ ಮಾಡಿದ್ದಾರೆ. “ನಾನು ಎಲ್ಲರಿಗೂ ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನಿಮ್ಮ ಅಪಾರ ಬೆಂಬಲಕ್ಕೆ ನನ್ನ ಅನಂತಾನಂತ ಧನ್ಯವಾದಗಳು. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇದೀಗ ನಾನು ಅನಾರೋಗ್ಯದಿಂದ ಸುಧಾರಿಸಿಕೊಳ್ಳುತ್ತಿದ್ದೇನೆ. ಇವನ್ನೆಲ್ಲ ನಿಮಗೆ ಹೇಳಬೇಕು ಅಂತ ಅನಿಸಿತು. ನಾನು ನಿಮಗೆ ಕೃತಜ್ಞನಾಗಿದ್ದೇನೆ. ಇದು ನನ್ನ ಆರೋಗ್ಯದ ಚೇತರಿಕೆಯ ಹಾದಿ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು. ಈ ರೀತಿಯ ಪದಗಳಲ್ಲಿ ಕೃತಜ್ಞತೆ ಹೇಳುವುದಕ್ಕೆ ಸಾಲುವುದದೇ ಇಲ್ಲ. ನಿಮ್ಮ ಬೆಂಬಲವೇ ನನಗೆ ಒಂದು ರೀತಿಯ ನೆಗೆಟಿವ್ ಎನರ್ಜಿ ಇದ್ದಂತೆ. ಈ ಕಷ್ಟದ ಸಮಯದಲ್ಲಿ ನನಗೆ ಅದೇ ಶಕ್ತಿ” ಅಂತ ರಿಷಭ್ ಪಂತ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕವೂ ಧನ್ಯವಾದ ಅರ್ಪಣೆ
ಇನ್ನು ಟ್ವೀಟ್ ಮೂಲಕವೂ ರಿಷಭ್ ಪಂತ್ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಎಲ್ಲಾ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಮತ್ತು ಮುಂಬರುವ ಸವಾಲುಗಳಿಗೆ ನಾನು ಸಿದ್ಧನಿದ್ದೇನೆ” ಅಂತ ಪಂತ್ ಟ್ವೀಟ್ ಮಾಡಿದ್ದಾರೆ.

ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ರಿಷಭ್ ಪಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಯ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ತ್ರೋಸ್ಕೊಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ ಪಾರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ.

ಪಂತ್ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ರಿಷಭ್ ಪಂತ್ ಈ ತಿಂಗಳ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. "ರಿಷಭ್ ಪಂತ್ ಅವರು ಶುಕ್ರವಾರ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ವೀಕ್ಷಣೆಯಲ್ಲಿದ್ದಾರೆ. ಮುಂದಿನ ಕ್ರಮ ಮತ್ತು ಪುನರ್ವಸತಿಯನ್ನು ಡಾ ದಿನ್ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ಔಷಧ ತಂಡವು ಅನುಸರಿಸುತ್ತದೆ" ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ.
ಡಿಸೆಂಬರ್ 30ರಂದು ನಡೆದಿದ್ದ ಅಪಘಾತ
ಡಿಸೆಂಬರ್ 30 ರ ಮುಂಜಾನೆ ತನ್ನ ದೆಹಲಿಯಿಂದ ಡೆಹ್ರಾಡೂನ್ನಲ್ಲಿರುವ ತಮ್ಮ ಮನೆಗೆ ರಿಷಭ್ ಪಂತ್ ಮರಳುತ್ತಿದ್ದರು. ಹೊಸ ವರ್ಷಕ್ಕೆ ತಾಯಿಗೆ ಸಪ್ಪ್ರೈಸ್ ಕೊಡಬೇಕು ಅಂತ ವೇಗವಾಗಿ ಬರುತ್ತಿದ್ದ ರಿಷಭ್ ಪಂತ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಅಂದು ಪ್ರಾಣಾಪಾಯದಿಂದ ಪಾರಾಗಿದ್ದರು.
Cricket Rishabh Pant has recovered and thanked his fans through a Instagram Message.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm