ಬ್ರೇಕಿಂಗ್ ನ್ಯೂಸ್
10-02-23 01:28 pm Source: news18 ಕ್ರೀಡೆ
ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs AUS) ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್ ಶತಕ ಸಿಡಿಸಿದ್ದಾರೆ.
ರೋಹಿತ್ ಈ ಹಿಂದೆ 2021ರ ಸೆಪ್ಟೆಂಬರ್ನಲ್ಲಿ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಶತಕ ದಾಖಲಿಸಿದ್ದರು. ರೋಹಿತ್ 171 ಎಸೆತಗಳಲ್ಲಿ ಶತಕ ಪೂರೈಸಿದರು. ಅವರು ತಮ್ಮ ಶತಕದಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ಗಳನ್ನು ಬಾರಿಸಿದರು. ಇನ್ನು, ರೋಹಿತ್ ಮೊದಲ ವಿಕೆಟ್ಗೆ ಕೆಎಲ್ ರಾಹುಲ್ ಜೊತೆ 76 ರನ್ ಜೊತೆಯಾಟ ನಡೆಸಿದರು. ಬಳಿಕ ಆರ್ ಅಶ್ವಿನ್ ಜೊತೆ ಎರಡನೇ ವಿಕೆಟ್ ಗೆ 42 ರನ್ ಸೇರಿಸಿದರು.


ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿದರೆ, ಆರ್ ಅಶ್ವಿನ್ 23 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಸಹ ಕೇವಲ 7 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ಕೂಡ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ 26 ಎಸೆತಗಳಲ್ಲಿ 12 ರನ್ ಕೊಡುಗೆ ನೀಡಿದರು. ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ ಕಳೇದ ಕೆಲ ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲಿ ಅವರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯನ್ನು ಇಟ್ಟಿದ್ದರು. ಅದರಂತೆ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು.

![,[object Object], ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.](https://images.news18.com/kannada/uploads/2023/02/FolrKPnaAAEX9F1-167601440216x9.jpg?im=Resize,width=904,aspect=fit,type=normal)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs AUS 1st 2nd Day Rohit Sharma hits 9th Test Century against Australia Nagpur Test.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm