ಬ್ರೇಕಿಂಗ್ ನ್ಯೂಸ್
28-02-23 12:53 pm Source: news18 ಕ್ರೀಡೆ
ನಾಳೆಯಿಂದ ಇಂದೋರ್ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. 3ನೇ ಪಂದ್ಯವು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯ ಗೆದ್ದರೆ ಸರಣಿ ಜಯದ ಜೊತೆ ಐಸಿಸಿ ಶ್ರೇಯಾಂಕದಲ್ಲಿಯೂ ಅಗ್ರಸ್ಥಾನಕ್ಕೆ ತಲುಪಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಮುನ್ನಡೆ ಸಾಧಿಸಿದೆ. ನಾಳೆಯಿಂದ ಸರಣಿಯ 3ನೇ ಪಂದ್ಯ ಆರಂಭವಾಗಲಿದೆ.
ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಬಾರಿಗೆ ಟೆಸ್ಟ್ ಸ್ವರೂಪದಲ್ಲಿ ಮುಖಾಮುಖಿಯಾಗಲಿವೆ. ಇಲ್ಲಿ ಆತಿಥೇಯರು ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಈ ಮೈದಾನದಲ್ಲಿ ಭಾರತ ತಂಡ ಹೆಚ್ಚು ಪ್ರಾಭಲ್ಯ ಸಾಧಿಸಿದೆ. ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್ಗಳು ಸಾಮಾನ್ಯವಾಗಿ ಸಣ್ಣ ಸ್ವರೂಪದಲ್ಲಿ ಬ್ಯಾಟಿಂಗ್ ಸ್ನೇಹಿಯಾಗಿರುತ್ತವೆ. ಆದರೆ ಉಪ-ಖಂಡದ ಪಿಚ್ಗಳಂತೆ ಇಲ್ಲಿಯೂ ಟೆಸ್ಟ್ ಪಂದ್ಯವು ಮುಂದುವರೆದಂತೆ ಸ್ಪಿನ್ ಬೌಲರ್ಗಳಿಗೆ ಸಹಾಯ ಮಾಡುತ್ತದೆ. ಅಶ್ವಿನ್ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.



ಇಂದೋರ್ ಹವಾಮಾನ ನೋಡುವುದಾರೆ, ಮಾರ್ಚ್ 1ರಿಂದ 5ರ ವರೆಗೂ ಬಿಸಿ ವಾತಾವರಣವಿರುತ್ತದೆ. ಗರಿಷ್ಠ ತಾಪಮಾನವು 36 C ವರೆಗೆ ಮತ್ತು ಸರಾಸರಿ ತಾಪಮಾನ 35 C ಗೆ ಇರುತ್ತದೆ. ಯಾವುದೇ ಮಳೆಯ ಸೂಚನೆಯಿಲ್ಲ. ಹಾಗಾಗಿ, ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ಹವಾಮಾನದಿಂದ ಯಾವ ತೊಂದರೆಯಿಲ್ಲ. ಭಾರತ ಮತ್ತು ಆಸೀಸ್ ನಡುವಿನ ಈ ಪಂದ್ಯವನ್ನು ನೀವು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ನ ಎಲ್ಲಾ ಚಾನಲ್ಗಳ್ಲಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.



ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್. ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಪೀಟರ್ ಹ್ಯಾಂಡ್ಸ್ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್.
India vs Australia 3rd test playing 11 and Indore Holkar stadium pitch report.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm