ಬ್ರೇಕಿಂಗ್ ನ್ಯೂಸ್
01-03-23 01:57 pm Source: news18 ಕ್ರೀಡೆ
ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಅವರ ಕಳಪೆ ಫಾರ್ಮ್ ಗೆ ಎಲ್ಲೆಡೆ ಟೀಕೆ ವ್ಯಕ್ತವಾಗುತ್ತಿದೆ. ಭಾರತದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಟ್ವಿಟ್ಟರ್ ನಲ್ಲಿ ರಾಹುಲ್ ಆಟದ ಬಗ್ಗೆ ನೇರವಾಗಿ ಮಾತನಾಡಿದ್ದರು. 40ಕ್ಕಿಂತ ಕಡಿಮೆ ಸರಾಸರಿ ಹೊಂದಿರುವ ಆಟಗಾರರು ಟೆಸ್ಟ್ ಮಾದರಿಯಲ್ಲಿ ಹೇಗೆ ಮುಂದುವರಿಯುತ್ತಾರೆ ಎಂದು ವೆಂಕಟೇಶ್ ಪ್ರಸಾದ್ ಕಟುವಾದ ಕಾಮೆಂಟ್ ಮಾಡಿದ್ದರು. ಕಳೆದ 12 ತಿಂಗಳಿಂದ ರಾಹುಲ್ ಅವರ ಟೆಸ್ಟ್ ಸರಾಸರಿ 14ಕ್ಕಿಂತ ಕಡಿಮೆ ಇದೆ.
ರಾಹುಲ್ ಅವರನ್ನು ತಂಡದಲ್ಲಿ ಮುಂದುವರಿಸಿದ್ದಕ್ಕೆ ಅಭಿಮಾನಿಗಳು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ಆದರೆ ಕೊಹ್ಲಿಯನ್ನು ಎಳೆದು ತರಲು ಯತ್ನಿಸಿದ್ದಾರೆ. ತಂಡದಲ್ಲಿ ವಿಫಲರಾಗುತ್ತಿರುವುದು ರಾಹುಲ್ ಒಬ್ಬರೇ ಅಲ್ಲ, ಇನ್ನು ಕೆಲವು ಆಟಗಾರರು ಕೂಡ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದು ಪೂಜಾರ ಮತ್ತು ಕೊಹ್ಲಿ ವಿರುದ್ಧ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.



ಇದಲ್ಲದೆ, ರಾಹುಲ್ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಈ ಹಿಂದೆ ಹಲವು ಬಾರಿ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಆದರೆ ಆಟಗಾರರು ವಿಫಲರಾದಾಗ ಟೀಕೆ ಮಾಡುವುದು ಸಹಜ ಎಂದಿದ್ದಾರೆ. ರಾಹುಲ್ ಅವರ ಮೌಲ್ಯವನ್ನು ತಿಳಿದಿರುವ ಮ್ಯಾನೇಜ್ಮೆಂಟ್ ಅವರನ್ನು ಬೆಂಬಲಿಸುತ್ತದೆ ಎಂದು ಗಂಗೂಲಿ ಹೇಳಿದ್ದಾರೆ. ರಾಹುಲ್ ಶೀಘ್ರದಲ್ಲೇ ಫಾರ್ಮ್ಗೆ ಮರಳುತ್ತಾರೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದರು.




ಗಂಗೂಲಿ ಅವರ ಇತ್ತೀಚಿನ ಕಾಮೆಂಟ್ಗಳಿಗೆ ಕೊಹ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಗಂಗೂಲಿ ಮತ್ತೊಮ್ಮೆ ಕೊಹ್ಲಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5ರ ವರೆಗೆ ಇಂದೋರ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದಲ್ಲಿ ಭಾರತ ತಂಡ ಅಗ್ರಸ್ಥಾನದ ಜೊತೆಗೆ ಸರಣಿ ಗೆಲ್ಲಲಿದೆ.
IND vs AUS 3rd test criticism comes when you fail says Sourav Ganguly.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm