ಬ್ರೇಕಿಂಗ್ ನ್ಯೂಸ್
20-03-23 12:13 pm Source: news18 ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ಗಳ ಹೀನಾಯ ಸೋಲು ಕಂಡಿದೆ. ಈ ಪಂದ್ಯದಲ್ಲಿ ತಂಡ 50 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸರಣಿಯ ಎರಡೂ ಪಂದ್ಯಗಳಲ್ಲಿ ಹೊಸ ಚೆಂಡಿನೊಂದಿಗೆ ಭಾರತೀಯ ಬ್ಯಾಟ್ಸ್ಮನ್ಗಳಿಗೆ ಸಾಕಷ್ಟು ತೊಂದರೆ ನೀಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲೂ ಒಟ್ಟು 5 ವಿಕೆಟ್ ಕಬಳಿಸಿದರು.ಈ ವರ್ಷ ಭಾರತ ತಂಡಕ್ಕೆ 2 ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವಿದೆ. ಭಾರತ ತಂಡ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ತಲುಪಿದೆ. ಅದೇ ಸಮಯದಲ್ಲಿ, ODI ವಿಶ್ವಕಪ್ ಅಕ್ಟೋಬರ್-ನವೆಂbರ್ನಲ್ಲಿ ತವರಿನಲ್ಲಿ ನಡೆಯಲಿದೆ. ಆದರೆ ತಂಡದ ದೊಡ್ಡ ಕೊರತೆ ಈ ಬಾರಿಯೂ ದೊಡ್ಡ ಹೊಡೆತ ನೀಡಬಹುದು.


ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಆರಂಭದಲ್ಲಿಯೇ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಎಡಗೈ ವೇಗದ ಬೌಲರ್ಗಳು ಟೀಂ ಇಂಡಿಯಾವನ್ನು ಸದಾ ಕಾಡುತ್ತಲೇ ಇದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಿಂದ 2019ರ ODI ವಿಶ್ವಕಪ್ನ ಸೆಮಿಫೈನಲ್ವರೆಗೂ ಈ ಸಮಸ್ಯೆ ಕಾಡುತ್ತಲೇ ಇದೆ.2019ರ ಏಕದಿನ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಮೊದಲು ಆಡುವಾಗ ಕಿವೀಸ್ ತಂಡ 238 ರನ್ ಗಳಿಸಿತ್ತು. ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರ ದೊಡ್ಡ ವಿಕೆಟ್ ಪಡೆದರು. ಜಡೇಜಾ ಗರಿಷ್ಠ 77 ರನ್ ಗಳಿಸಿದ್ದರು.


2021ರಲ್ಲಿ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್ನಲ್ಲೂ ಭಾರತ ತಂಡದ ಈ ದೌರ್ಬಲ್ಯ ಬಯಲಾಗಿತ್ತು. ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಆರಂಭದಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರನ್ನು ಔಟ್ ಮಾಡಿದ್ದರು.ಈ ಕಾರಣದಿಂದಾಗಿ ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ತಂಡ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಪದೇ ಪದೇ ಭಾರತ ವೇಗದ ಬೌಲರ್ಗಳ ಎದುರು ಮಂಡಿಯೂರುತ್ತಿದ್ದಾರೆ.



ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಜೂನ್ 7 ರಿಂದ ಇಂಗ್ಲೆಂಡ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಇಂಗ್ಲಿಷ್ ಪರಿಸ್ಥಿತಿಗಳಲ್ಲಿ ಸ್ಟಾರ್ಕ್ ಇನ್ನಷ್ಟು ಮಾರಕವಾಗಲಿದ್ದಾರೆ. ಅದೇ ಸಮಯದಲ್ಲಿ, ಈ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ. ಹೌದು, ಈ ಬಾರಿ ವಿಶ್ವಕಪ್ ಭಾರತದಲ್ಲಿಯೇ ನಡೆಯುತ್ತಿರುವುದರಿಂದ ಟೀಂ ಇಂಡಿಯಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಆದರೆ ಭಾರತದ ಈ ಸಮಸ್ಯೆ ಬೇಗ ಸರಿಪಡಿಸಿಕೊಳ್ಳದಿದ್ದಲ್ಲಿ ಮತ್ತೊಮ್ಮೆ ಐಸಿಸಿ ಟ್ರೋಫಿಯ ಕನಸು ಕನಸಾಗಿಯೇ ಉಳಿಯಲಿದೆ.
due to this it is doubtful that india will win the icc odi world cup.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm