ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm