ಬ್ರೇಕಿಂಗ್ ನ್ಯೂಸ್
24-04-23 12:58 pm Source: news18 ಕ್ರೀಡೆ
ರೋಹಿತ್ ಶರ್ಮಾ ಐಪಿಎಲ್ 2023ರ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 44 ರನ್ಗಳ ಇನ್ನಿಂಗ್ಸ್ಗಳನ್ನು ಆಡಿದರು. 6 ರನ್ಗಳಿಂದ ಅರ್ಧಶತಕ ವಂಚಿತರಾದರು. ರೋಹಿತ್ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದರು. ಈ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸಲು ಸಾಧ್ಯವಾಗದಿದ್ದರೂ ಅವರ ಖಾತೆಯಲ್ಲಿ ಅಪರೂಪದ ದಾಖಲೆ ಸೇರ್ಪಡೆಯಾಯಿತು. ರೋಹಿತ್ ಶರ್ಮಾ ಐಪಿಎಲ್ನಲ್ಲಿ 250 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ರೋಹಿತ್ ಈ ಸಾಧನೆ ಮಾಡಿದರು. ಈ ಮೂಲಕ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.


ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಐಪಿಎಲ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಗೇಲ್ 142 ಪಂದ್ಯಗಳಲ್ಲಿ 357 ಸಿಕ್ಸರ್ ಬಾರಿಸಿದ್ದಾರೆ. ಗೇಲ್ ಐಪಿಎಲ್ನಲ್ಲಿ ಆಡದಿದ್ದರೂ, ಆ ದಾಖಲೆ ಇನ್ನೂ ಯಾರ ಹತ್ತಿರವೂ ಮುರಿಯಲು ಸಾಧ್ಯವಾಗಲಿಲ್ಲ. ಐಪಿಎಲ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಡಿವಿಲಿಯರ್ಸ್ ಐಪಿಎಲ್ನಲ್ಲಿ ಒಟ್ಟು 251 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಐಪಿಎಲ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದವರಲ್ಲಿ ಗೇಲ್ ಮತ್ತು ಡಿವಿಲಿಯರ್ಸ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ 235 ಸಿಕ್ಸರ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 229 ಸಿಕ್ಸರ್ಗಳೊಂದಿಗೆ ಈ ಪಟ್ಟಿಯಲ್ಲಿದ್ದಾರೆ. ಸಿಕ್ಸರ್ ವಿಚಾರದಲ್ಲಿ ರೋಹಿತ್ ನಂತರದ ಸ್ಥಾನದಲ್ಲಿ ಧೋನಿ ಮತ್ತು ಕೊಹ್ಲಿ ಇದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ವಿಚಾರದಲ್ಲಿ ಮುಂದಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸೋಲು ಅನುಭವಿಸಬೇಕಾಯಿತು. ಮುಂಬೈ ತಂಡ ಕೊನೆಯ ಓವರ್ನಲ್ಲಿ 16 ರನ್ ಗಳಿಸಲು ಸಾಧ್ಯವಾಗಲಿಲ್ಲ. ಪಂಜಾಬ್ ಕಿಂಗ್ಸ್ ವೇಗಿ ಅರ್ಷದೀಪ್ ಸಿಂಗ್ ಕೊನೆಯ ಓವರ್ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿ ಮುಂಬೈ ತಂಡಕ್ಕೆ ಆಘಾತ ನೀಡಿದರು.

ರೋಹಿತ್ ಶರ್ಮಾ ಮತ್ತು ಕ್ಯಾಮರೂನ್ ಗ್ರೀನ್ ಎರಡನೇ ವಿಕೆಟ್ಗೆ 76 ರನ್ಗಳ ಜೊತೆಯಾಟ ನೀಡಿದರು. ಆ ನಂತರ ಸೂರ್ಯಕುಮಾರ್ ಯಾದವ್ ಮತ್ತು ಕ್ಯಾಮರೂನ್ ಗ್ರೀನ್ ಮೂರನೇ ವಿಕೆಟ್ಗೆ 75 ರನ್ ಸೇರಿಸಿದರು.ಒಂದು ಹಂತದಲ್ಲಿ ಮುಂಬೈ ಗೆಲುವಿನ ಸನಿಹ ಬಂದರೂ ಕೊನೆಯ ಓವರ್ನಲ್ಲಿ ಅರ್ಷದೀಪ್ ಎಲ್ಲಾ ಲೆಕ್ಕಾಚಾಋವನ್ನು ತಲೆಕೆಳಗಾಗಿಸಿದರು.
rohit sharma becomes the first indian to complete 250 sixes in ipl history.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm