ಬ್ರೇಕಿಂಗ್ ನ್ಯೂಸ್
02-05-23 12:46 pm Source: news18 ಕ್ರೀಡೆ
ಎಲ್ಲೆಲ್ಲೂ ವಿರಾಟ್ ಕೊಹ್ಲಿ-ಗಂಭೀರ್ ಜಗಳದ್ದೇ ಮಾತು. ಆ ಮಟ್ಟಕ್ಕೆ ಗಲಾಟೆಯಾಗಿದೆ ಅಂದ್ರೆ ಯೋಚನೆ ಮಾಡಿ. ಅದು ಆರ್ಸಿಬಿ ಸೋತಾಗ ಗಂಭೀರ್ ಕುಣಿದು ಕುಪ್ಪಳಿಸಿದ್ದರು. ಶ್ ಸನ್ನೆ ಮಾಡಿ ಅಲ್ಲಿ ನೆರೆದಿದ್ದವರಿಗೆ ವಾರ್ನಿಂಗ್ ಕೊಟ್ಟಿದ್ದರು. ಆದರೆ ನಿನ್ನೆ ಆರ್ಸಿಬಿ ಗೆಲುವನ್ನು ಗಂಭೀರ್ ಸಹಿಸಿಕೊಂಡಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಮತ್ತೊಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೊಂದು ಫೋಟೊ ಸಾಕು ವಿರಾಟ್ ಏನು ಅಂತ ಗೊತ್ತಾಗೋಕೆ ಅಂತಿದ್ದಾರೆ ಫ್ಯಾನ್ಸ್


ಗಲಾಟೆಗೂ ಮುನ್ನ ಗ್ರೌಂಡ್ ಒಳಗೆ ಅಭಿಮಾನಿಯೊಬ್ಬ ಬಂದು ವಿರಾಟ್ ಕೊಹ್ಲಿ ಕಾಲು ಮುಟ್ಟಿ ನಮಸ್ಕರಿಸಿದ್ದಾನೆ. ವಿರಾಟ್ ಕೂಡ ಅವರನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಇಷ್ಟೇ ಆಗಿದ್ದರೆ ಈ ಫೋಟೋ ವೈರಲ್ ಆಗುತ್ತಿರಲಿಲ್ಲ. ಆ ಅಭಿಮಾನಿ ಗೌತಮ್ ಗಂಭೀರ್ ಮುಂದೆಯೇ ವಿರಾಟ್ ಕಾಲಿಗೆ ಬಿದ್ದಿದ್ದಾರೆ. ಆಂಜನೇಯ ಶ್ರೀರಾಮನ ಮುಂದೆ ಮಂಡಿಯೂರುವಂತೆ ಫೋಟೋ ಕಾಣಿಸುತ್ತಿದ್ದು, ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ.


ವಿರಾಟ್ ಕೊಹ್ಲಿ ಗತ್ತು ಎಲ್ಲರಿಗೂ ಗೊತ್ತು. ಈ ಫೋಟೋ ನೋಡಿದ್ರೆ ಸಾಕು. ಗಂಭೀರ್ ಮಾಡಿದ್ದೇ ತಪ್ಪು. ಗೆದ್ದಾಗ ಆ ರೀತಿ ಮಾಡಿ, ಸೋತಾಗ ಗಲಾಟೆ ಮಾಡೋದು ಎಷ್ಟು ಸರಿ ಅಂತ ಅಭಿಮಾನಿಗಳು ಕೇಳುತ್ತಿದ್ದಾರೆ.ಆರ್ಸಿಬಿ ತಂಡದ ಆಟಗಾರ ಕಿಂಗ್ ಕೊಹ್ಲಿ, ಎಲ್ಎಸ್ಜಿ ತಂಡದ ಮೆಂಟರ್ ಗಂಭೀರ್ ನಡುವೆ ದೊಡ್ಡ ಗಲಾಟೆಯಾಗಿತ್ತು. ಇಬ್ಬರು ಆಟಗಾರರು ಮೈದಾನದಲ್ಲೇ ಬಡಿದಾಡಿಕೊಳ್ಳುವಂತಹ ಪರಿಸ್ಥಿತಿಗೆ ಹೋಗಿತ್ತು.


ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಬಿಸಿಸಿಐ ನಿಯಮ ಲೆವಲ್ 2 ಅಪರಾಧ ಮಾಡಿದ್ದಾರೆ ಅಂತ ಕೊಹ್ಲಿ-ಗಂಭೀರ್ ಪಂದ್ಯದ ಶುಲ್ಕದ ಮೇಲೆ 100% ದಂಡವನ್ನು ವಿಧಿಸಲಾಗಿದೆ. ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ನಷ್ಟು ದಂಡ ಕಟ್ಟಬೇಕು.ಗಂಭೀರ್, ಕೊಹ್ಲಿ ಮತ್ತು ನವೀನ್ ತಮ್ಮ ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದಾರೆ.
ipl 2023 fan touches virat kohlis feet infront of gautam gambhir video viral.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm