ಬ್ರೇಕಿಂಗ್ ನ್ಯೂಸ್
09-05-23 02:46 pm Source: news18 ಕ್ರೀಡೆ
ಇಂದು ಸಂಜೆ ಆರ್ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್ ರೇಸ್ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ. ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್ ವಿಭಾಗ ಸಾಕಷ್ಟು ವೀಕ್ ಆಗಿದೆ.
ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ. ಈಗಾಗಲೇ ಜೋರ್ಡನ್ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್ಅಪ್ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.


ಅದರಲ್ಲೂ ಸ್ಥಳೀಯ ಬೌಲರ್ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ . ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.



ಆದರೆ ಇದರ ನಡುವೆ ಆರ್ಸಿಬಿ ಸ್ಟಾರ್ ಬೌಲರ್ ತಂಡದಿಂದ ಹೊರನಡೆದಿರುವುದು ಇದೀಗ ಆರ್ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್ ಬೌಲಿಂಗ್ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.
ipl 2023 jofra archer ruled out of tournament with injury and chris jordan named replacement.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm