ಬ್ರೇಕಿಂಗ್ ನ್ಯೂಸ್
16-05-23 12:00 pm Source: news18 ಕ್ರೀಡೆ
ಸದ್ಯ ಐಪಿಎಲ್ ತನ್ನ ಕೊನೆಯ ಹಂತಕ್ಕೆ ಬಂದು ತಲುಪುತ್ತಿದೆ. ಬರೋಬ್ಬರಿ 2 ತಿಂಗಳ ಕ್ರಿಕೆಟ್ ಹಬ್ಬಕ್ಕೆ ಇನ್ನೇನು ಕೆಲ ದಿನಗಳಲ್ಲಿಯೇ ತೆರೆ ಬೀಳಲಿದೆ. ಆದರೆ ಈ ಬಾರಿ ಐಪಿಎಲ್ನ ಪ್ಲೇಆಪ್ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲವಾಗಿದೆ. ಹೌದು, ಪ್ಲೇಆಫ್ನಲ್ಲಿ ಸರಿಯಾದ ಸ್ಪಷ್ಟತೆ ಇಲ್ಲವಾದ ಕಾರಣ ಪ್ರತಿ ತಂಡಗಳಿಗೂ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆಗಳಿವೆ. ಇದರ ನಡುವೆ ಇದೀಗ ಹೊಸ ಸುದ್ದಿ ಚರ್ಚೆಯಾಗುತ್ತಿದ್ದು, ಆರ್ಸಿಬಿ ಮತ್ತು ಲಕ್ನೋ ಮುಖಾಮುಖಿ ಕುರಿತು.
ಈ ಬಾರಿ ಐಪಿಎಲ್ನಲ್ಲಿ ಯಾವುದು ಬೆಸ್ಟ್ ಮ್ಯಾಚ್ ಎಂದು ಕೇಳಿದರೆ ಪ್ರತಿಯೊಬ್ಬರೂ ಹೇಳುವ ಏಕೈಕ ಉತ್ತರವೆಂದರೆ ಅದು ಆರ್ಸಿಬಿ ಮತ್ತು ಲಕ್ನೋ ನಡುವಿನ ಹಣಾಹಣಿ ಎಂದು. ಹೌದು, ಈ ಪಂದ್ಯದಲ್ಲಿ ಆಟಕ್ಕಿಂತ ಹೆಚ್ಚು ಹೈಲೇಟ್ ಆಗಿದ್ದು, ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳ. ಈವರೆಗೂ ಆರ್ಸಿಬಿ ಆಗಲಿ ಅಥವಾ ಲಕ್ನೋ ತಂಡವಾಗಲಿ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿಲ್ಲ. ಆದರೆ ಉಭಯ ತಂಡಗಳ ಅಭಿಮಾನಿಗಳು ಮತ್ತೆ ಯಾವಾಗ ಆರ್ಸಿಬಿ ಮತ್ತು ಲಕ್ನೋ ತಂಡಗಳು ಮುಖಾಮುಖಿ ಆಗಲಿದೆ ಎಂದು ಕಾತುರರಾಗಿದ್ದಾರೆ.


ಒಮ್ಮೆ ಏನಾದರೂ ಈ ರೀತಿ ಆದ್ದಲ್ಲಿ ಮತ್ತೊಮ್ಮೆ ಆರ್ಸಿಬಿ ಮತ್ತು ಲಕ್ನೋ ತಂಡಗಳು ಈ ವರ್ಷವೇ ಮುಖಾಮುಖಿ ಆಗಲಿದೆ. ಆದರೆ ಈ ಬಿಗ್ ಫೈಟ್ ನಡೆಯಬೇಕಾದರೆ ಈ ರೀತಿ ಮ್ಯಾಜಿಕ್ ನಡೆಯಬೇಕಿದೆ. ಐಪಿಎಲ್ 2023 ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಲಕ್ನೋ ತಂಡಕ್ಕೆ ಇನ್ನು ಲೀಗ್ ಹಂತದಲ್ಲಿ 2 ಪಂದ್ಯಗಳು ಬಾಕಿ ಉಳಿದಿದೆ. ಈ ಎರಡೂ ಪಂದ್ಯ ಗೆದ್ದರೆ ಲಕ್ನೋ 17 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.


ಆದರೆ ಮುಂಬೈ ಮುಂದಿನ 2 ಪಂದ್ಯದಲ್ಲಿ ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೆ 16 ಅಂಕ ಪಡೆಯಲಿದೆ. ಇತ್ತ ಆರ್ಸಿಬಿ ಸಹ ಮುಂದಿನ 2 ಪಂದ್ಯವನ್ನು ಭರ್ಜರಿಯಾಗಿ ಗೆದ್ದರೆ ಉತ್ತಮ ರನ್ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಲಿದೆ. ಆಗ ಲಕ್ನೋ ಸಹ 3ನೇ ಸ್ಥಾನ ಹಾಗೂ ಆರ್ಸಿಬಿ 4ನೇ ಸ್ಥಾನದಲ್ಲಿರಲಿದೆ. ಆಗ ಅಗ್ರ ಸ್ಥಾನದಲ್ಲಿರುವ 2 ತಂಡಗಳು ಕ್ವಾಲಿಫೈಯರ್ ಪಂದ್ಯವಾಡಲಿದೆ. ಹಾಗೆಯೇ 3 ಮತ್ತು 4ನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ.
ಆಗ ಲಕ್ನೋ ಮತ್ತು ಆರ್ಸಿಬಿ 3 ಮತ್ತು 4ನೇ ಸ್ಥಾನದಲ್ಲಿದ್ದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಒಮ್ಮೆ ಇದೇನಾದರೂ ಆಗದಿದ್ದರೆ, ಲಕ್ನೋ 2ನೇ ಸ್ಥಾನಕ್ಕೇರಿದರೆ ಆಗ ಅಲ್ಲಿನ ಪಂದ್ಯದಲ್ಲಿ ಲಕ್ನೋ ಸೋತು, ಎಲಿಮಿನೇಟರ್ನಲ್ಲಿ ಆರ್ಸಿಬಿ ಗೆದ್ದರೆ 2ನೇ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿದೆ. ಇವೆಲ್ಲದರ ನಡುವೆ ದೊಡ್ಡ ಸುದ್ದಿಯೆಂದರೆ ಇಬ್ಬರೂ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ನಲ್ಲಿ ಗೆದ್ದರೆ ಲಕ್ನೋ ಮತ್ತು ಆರ್ಸಿಬಿ ಫೈನಲ್ನಲ್ಲಿ ಸೆಣಸಾಡಲಿದೆ. ಆದರೆ ಈ ಎಲ್ಲವೂ ನಡೆಯಬೇಕಾದರೆ ಉಭಯ ತಂಡಗಳು ಮೊದಲು ಪ್ಲೇಆಫ್ ಪ್ರವೇಶಿಸಬೇಕಿದೆ.
rcb vs lsg will meet again in ipl 2023 playoffs.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm