ಬ್ರೇಕಿಂಗ್ ನ್ಯೂಸ್
17-05-23 12:46 pm Source: news18 ಕ್ರೀಡೆ
ಸನ್ ರೈಸರ್ಸ್ ಹೈದರಾಬಾದ್ 2017ರಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಭಾರಿ ಮೊತ್ತಕ್ಕೆ ಖರೀದಿಸಿತು. ಆಗ ಸಿರಾಜ್ ಜನಮಾನಸದಲ್ಲಿ ಅಷ್ಟಾಗಿ ಗುರುತಿಸಿಕೊಳ್ಳಲಿಲ್ಲ. ಆದರೆ ಅವರ ಕೌಶಲ್ಯ ಮತ್ತು ಪ್ರತಿಭೆಯನ್ನು ಗುರುತಿಸಿ ಅವರನ್ನು ತಂಡಕ್ಕೆ ತೆಗೆದುಕೊಳ್ಳಲಾಗಿತ್ತು. ಒಂದು ವರ್ಷದ ನಂತರ, RCB ಅವರನ್ನು ತಮ್ಮ ತಂಡಕ್ಕೆ ತೆಗೆದುಕೊಂಡಿತು. 19ನೇ ವಯಸ್ಸಿನವರೆಗೂ ಟೆನಿಸ್ ಬಾಲ್ ಕ್ರಿಕೆಟ್ ಆಡಿದ್ದ ಸಿರಾಜ್ 23ನೇ ವಯಸ್ಸಿನಲ್ಲಿ ಆರ್ಸಿಬಿ ತಂಡದಲ್ಲಿ ಆಡುತ್ತಿದ್ದರು.
ಆರಂಭದಲ್ಲಿ ಅವರ ಬೌಲಿಂಗ್ನಲ್ಲಿ ಉತ್ತಮ ಹಿಡಿತವಿರಲಿಲ್ಲ. ಆದರೆ ಕ್ರಮೇಣ ಸ್ಟಾರ್ ಬೌಲರ್ ಆಗಿ ಬದಲಾದರು. ಭಾರತ ತಂಡದಲ್ಲಿಯೂ ಅವಕಾಶ ಸಿಕ್ಕಿತು. ಈಗ ಅವರು ತಮ್ಮ ಜೀವನದಲ್ಲಿ ಸಾವಿನ ಬಾಗಿಲಿನಿಂದ ಹಿಂತಿರುಗಿದ ಘಟನೆಯ ಬಗ್ಗೆ ಹೇಳಿಕೊಂಡಿದ್ದರು. ಬ್ರೇಕ್ಫಾಸ್ಟ್ ವಿತ್ ಚಾಂಪಿಯನ್ಸ್ ಶೋನಲ್ಲಿ ಮಾತನಾಡಿದ ಮೊಹಮ್ಮದ್ ಸಿರಾಜ್, ನನಗೆ ಒಮ್ಮೆ ಡೆಂಗ್ಯೂ ಜ್ವರ ಬಂದಿತ್ತು. ಆ ಸಮಯದಲ್ಲಿ ಪ್ಲೇಟ್ಲೆಟ್ಗಳು ವೇಗವಾಗಿ ಕಡಿಮೆಯಾಗುತ್ತಿತ್ತು.
U-23 ತಂಡದ ಜೊತೆ ಮರುದಿನ ಪಂದ್ಯಕ್ಕಾಗಿ ನಾನು ಹೊರಡಬೇಕಿತ್ತು. ನಾನು ಟೆನ್ಶನ್ ನಲ್ಲಿ ಓಡಾಡುತ್ತಿದ್ದೆ. ನನ್ನ ಹೆಸರು ತಂಡದಲ್ಲಿದ್ದರೂ ಸಹ ನಾನು ಮಾತ್ರ ಆಸ್ಪತ್ರೆಯಲ್ಲಿದ್ದೆ. ನನಗೆ ಡೆಂಗ್ಯೂ ಲಕ್ಷಣ ಇದೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದರು. ಆ ವೇಳೆಗಾಗಲೇ ನನ್ನ ರಕ್ತ ಕಣಗಳೂ ಕಡಿಮೆ ಆಗಿದ್ದವು. ಆಸ್ಪತ್ರೆಗೆ ಸೇರಿಸದೇ ಇದ್ದಿದ್ದರೆ ನಾನು ಸಾಯುತ್ತಿದ್ದೆ ಎಂದು ವೈದ್ಯರು ಹೇಳಿದ್ದರು ಎಂದು ಸಿರಾಜ್ ಹೇಳಿಕೊಂಡಿದ್ದಾರೆ. ಇದರ ನಡುವೆ ನನ್ನ ಸ್ಥಿತಿಯ ಬಗ್ಗೆ ತರಬೇತುದಾರರ ಬಳಿಯೂ ಹೇಳಿದ್ದೆ.
ಆದರೆ ನಾನು ತಂಡಕ್ಕೆ ಹೊಸಬನಾಗಿದ್ದರಿಂದ ಕೆಲವರು ನನ್ನ ಮಾತನ್ನು ನಂಬಲಿಲ್ಲ. ನಾನು ಸುಳ್ಳು ಹೇಳುತ್ತಿದ್ದೇನೆ ಎಂದು ಎಲ್ಲರೂ ಭಾವಿಸಿದ್ದರು. ಏಕೆಂದರೆ ನಾನು ಸುಳ್ಳು ಹೇಳಿ ಅಭ್ಯಾಸದಿಂದ ದೂರವಿರುತ್ತೇನೆ ಎಂದು ಅವರು ಅವರುಗಳು ಅಂದುಕೊಂಡಿದ್ದರು ಎಂದು ಸಿರಾಜ್ ಹೇಳಿದ್ದಾರೆ. ಪ್ರಸ್ತುತ ಆರ್ಸಿಬಿ ತಂಡದಲ್ಲಿರುವ ಮೊಹಮ್ಮದ್ ಸಿರಾಜ್ ಈ ಋತುವಿನಲ್ಲಿ ಫಾರ್ಮ್ನಲ್ಲಿದ್ದಾರೆ. ಈ ಬಾರಿ ಮೊಹಮ್ಮದ್ ಸಿರಾಜ್ 12 ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದಾರೆ. ಅತಿ ಹೆಚ್ಚು ಡಾಟ್ ಬೌಲ್ ಮಾಡಿದ ಬೌಲರ್ಗಳಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ.
ipl 2023 rcb star bowler mohammad siraj is suffering from dengue fever.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm