ಬ್ರೇಕಿಂಗ್ ನ್ಯೂಸ್
24-05-23 03:31 pm Source: news18 ಕ್ರೀಡೆ
ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ಗೆ ಅರ್ಹತೆ ಪಡೆದಿವೆ.
ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.
ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್ಗೆ ಅರ್ಹತೆ ಪಡೆಯುತ್ತವೆ. ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ಗೆ ಅರ್ಹತೆ ಪಡೆಯುತ್ತಾರೆ.
ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನು, ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
icc announces schedule for world cup 2023 qualifiers.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 10:11 pm
Mangalore Correspondent
Case against MLA Harish Poonja in Belthangady...
19-05-24 08:56 pm
Belthangady Harish Poonja, Case: ಯುವಮೋರ್ಚಾ ಮು...
19-05-24 08:36 pm
MLC Bhoje Gowda in Mangalore: ಎಸ್ಸೆಸ್ಸೆಲ್ಸಿ ಪ...
19-05-24 04:11 pm
Dr Dhananjay Sarji in Mangalore, Vidhan Paris...
19-05-24 03:34 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm