ಬ್ರೇಕಿಂಗ್ ನ್ಯೂಸ್
03-06-23 02:37 pm Source: news18 ಕ್ರೀಡೆ
ಭಾರತ ಮತ್ತು ಟೀಂ ಇಂಡಿಯಾ ಎರಡೂ ತಂಡಗಳು ಈಗಾಗಲೇ ಲಂಡನ್ ತಲುಪಿದ್ದು ಅಭ್ಯಾಸ ನಡೆಸುತ್ತಿವೆ. ಮತ್ತೊಂದೆಡೆ ಅಂತಿಮ ತಂಡದ ಬಗ್ಗೆ ಟೀಂ ಇಂಡಿಯಾ ಚಿಂತನೆ ನಡೆಸುತ್ತಿದೆ. ಯಾರನ್ನು ಆಡಿಸಬೇಕು? ಯಾರನ್ನು ಬೆಂಚ್ ಮೇಲೆ ಹಾಕಬೇಕು ಎಂದು ಕಾದುನೋಡಬೇಕಿದೆ. ಫೈನಲ್ ಇಂಗ್ಲೆಂಡ್ ನಲ್ಲಿ ನಡೆಯಲಿರುವುದರಿಂದ ವೇಗಿಗಳಿಗೆ ಇದು ಸೂಕ್ತವಾಗಿದೆ. ಭಾರತ ಮೂರು ಸೀಮರ್ಗಳು ಮತ್ತು ಇಬ್ಬರು ಸ್ಪಿನ್ನರ್ಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಪಿಚ್ ಕಳೆದ ಎರಡು ದಿನಗಳಿಂದ ಸ್ಪಿನ್ಗೆ ಒಲವು ತೋರುವ ಸಾಧ್ಯತೆಯಿದೆ. ಭಾರತ ಇಬ್ಬರು ಸ್ಪಿನ್ನರ್ಗಳೊಂದಿಗೆ ಆಡಬೇಕಿದೆ.
ಈ ವರ್ಷದ ಮಾರ್ಚ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಅಕ್ಷರ್ ಪಟೇಲ್ ಅವರನ್ನು ಬೆಂಚ್ಗೆ ಸೀಮಿತಗೊಳಿಸುವ ಸಾಧ್ಯತೆಯಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಕ್ಷರ್ ಪಟೇಲ್ 4 ಟೆಸ್ಟ್ ಪಂದ್ಯಗಳಲ್ಲಿ 264 ರನ್ ಗಳಿಸಿದ್ದರು. ಇದರಲ್ಲಿ 3 ಅರ್ಧಶತಕಗಳೂ ಸೇರಿವೆ. ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಪ್ರತಿ ಬಾರಿ ಬ್ಯಾಟಿಂಗ್ನಲ್ಲಿ ಸಹಾ ಮಾಡಿದ್ದಾರೆ. ಆದರೆ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ನಲ್ಲಿ ಆಡುವುದು ಅನುಮಾನ. ಏಕೆಂದರೆ ಭಾರತ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಡೆಗೆ ವಾಲುತ್ತಿರುವಂತೆ ಕಾಣುತ್ತಿದೆ. ಹಾಗೂ ಆಲ್ ರೌಂಡರ್ ಕೋಟಾದಲ್ಲಿ ಜಡೇಜಾ ಕಣಕ್ಕೆ ಇಳಿಯಲಿದ್ದಾರೆ.


ಫಿನಾಲೆಯಲ್ಲಿ ಅಕ್ಷರ್ ಪಟೇಲ್ ಡ್ರಿಂಕ್ಸ್ ಬಾಯ್ ಪಾತ್ರಕ್ಕೆ ಸೀಮಿತವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಭಿಮಾನಿಗಳು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಐಪಿಎಲ್ 2023 ರಲ್ಲಿ ಅಶ್ವಿನ್ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಭಾರತ ಫೈನಲ್ನಲ್ಲಿ ನಾಲ್ವರು ಸೀಮರ್ಗಳೊಂದಿಗೆ ಕಣಕ್ಕೆ ಇಳಿಯಬೇಕು ಎಂದು ಸೂಚಿಸಲಾಗಿದೆ. ಶಮಿ, ಸಿರಾಜ್, ಉಮೇಶ್ ಯಾದವ್ ಜತೆ ಶಾರ್ದೂಲ್ ಠಾಕೂರ್ ಅವರನ್ನು ಕಣಕ್ಕಿಳಿಸಿದರೆ, ಇತ್ತ ಜಡೇಜಾ ಅವರನ್ನು ಸ್ಪಿನ್ನರ್ ಆಗಿ ಕಣಕ್ಕಿಳಿಸಬಹುದು.


ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಫೈನಲ್ಗೆ ಲಗ್ಗೆ ಇಟ್ಟಿದೆ. ಕಳೆದ ಬಾರಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡವು ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಹೊಸ ಜರ್ಸಿಯನ್ನು ಅಡಿಡಾಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನಾವರಣಗೊಳಿಸಿದೆ. ಬಿಸಿಸಿಐ ಅಡಿಡಾಸ್ನೊಂದಿಗೆ 5 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದು, ಒಪ್ಪಂದ 2028ರವರೆಗೆ ಇರಲಿದೆ. ಐದು ವರ್ಷಗಳ ಅವಧಿಯಲ್ಲಿ ಸುಮಾರು 350 ಕೋಟಿಗಳಷ್ಟು ಒಪ್ಪಂದವನ್ನು ನಿರೀಕ್ಷಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ind vs aus axar patel may bebenched in wtc final.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm