ಬ್ರೇಕಿಂಗ್ ನ್ಯೂಸ್
27-06-23 02:09 pm Source: News18 Kannada ಕ್ರೀಡೆ
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಪ್ರವಾಸಕ್ಕಾಗಿ, ಅನೇಕ ಅನುಭವಿ ಆಟಗಾರರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಅನೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಮುಂಬರುವ ಟೆಸ್ಟ್ ಪ್ರವಾಸಕ್ಕೆ ಸೇರ್ಪಡೆಗೊಂಡಿರುವ ಹೊಸ ಆಟಗಾರರಲ್ಲಿ ಯಶಸ್ವಿ ಜೈಸ್ವಾಲ್, ರಿತುರಾಜ್ ಗಾಯಕ್ವಾಡ್ ಮತ್ತು ಮುಖೇಶ್ ಕುಮಾರ್ ಅವರ ಹೆಸರುಗಳು ಪ್ರಮುಖವಾಗಿವೆ. ಈ ಮೂವರು ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

21 ವರ್ಷದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕಾಗಿ ಇದುವರೆಗೆ ಒಟ್ಟು 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 26 ಇನ್ನಿಂಗ್ಸ್ಗಳಲ್ಲಿ 80.21 ಸರಾಸರಿಯಲ್ಲಿ 1845 ರನ್ ಗಳಿಸಿದೆ. ಜೈಸ್ವಾಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಂಬತ್ತು ಶತಕ ಮತ್ತು ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರುತುರಾಜ್ ಗಾಯಕ್ವಾಡ್ ಕೂಡ ಭಾರತೀಯ ಪಡೆಯಲ್ಲಿ ಸೇರ್ಪಡೆಗೊಂಡಿದ್ದಾರೆ. ಗಾಯಕ್ವಾಡ್ ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಟ್ಟು 28 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 47 ಇನ್ನಿಂಗ್ಸ್ಗಳಲ್ಲಿ 42.19 ಸರಾಸರಿಯಲ್ಲಿ 1941 ರನ್ ಗಳಿಸಿದೆ. ಗಾಯಕ್ವಾಡ್ ಇಲ್ಲಿ ಆರು ಶತಕ ಮತ್ತು ಒಂಬತ್ತು ಅರ್ಧಶತಕಗಳನ್ನು ದಾಖಲಿಸಿದ್ದಾರೆ.
ಟೆಸ್ಟ್ ಸರಣಿಯ ತಂಡದಲ್ಲಿ ಬಿಹಾರದ ವೇಗದ ಬೌಲರ್ ಮುಖೇಶ್ ಕುಮಾರ್ ಕೂಡ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಇದುವರೆಗೆ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 70 ಇನ್ನಿಂಗ್ಸ್ಗಳಲ್ಲಿ 21.55 ಸರಾಸರಿಯಲ್ಲಿ 149 ವಿಕೆಟ್ಗಳನ್ನು ಪಡೆದಿದ್ದಾರೆ. ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 6 ಬಾರಿ 4 ವಿಕೆಟ್ ಹಾಗೂ 6 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಈ ಮೂವರು ಆಟಗಾರರ ಹೊರತಾಗಿ ಮತ್ತೊಮ್ಮೆ ಇಶಾನ್ ಕಿಶನ್ ಟೆಸ್ಟ್ ಮಾದರಿಗೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಿದ್ದಾರೆ. ಈ ಬಾರಿ ಕೆಂಪು ಚೆಂಡು ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ನಿರೀಕ್ಷೆಯಿದೆ. ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 48 ಪಂದ್ಯಗಳನ್ನು ಆಡುವಾಗ 82 ಇನ್ನಿಂಗ್ಸ್ಗಳಲ್ಲಿ 38.76 ಸರಾಸರಿಯಲ್ಲಿ 2985 ರನ್ ಗಳಿಸಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ನಿಂದ ಆರು ಶತಕಗಳು ಮತ್ತು 16 ಅರ್ಧಶತಕಗಳು ಹೊರಬಂದಿದೆ.
ಇನ್ನು, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2 ಪಮದ್ಯಗಳ ಟೆಸ್ಟ್ ಸರಣಿಯು ಮುಂದಿನ ತಿಂಗಳು ಜುಲೈ 12ರಿಂದ ಆರಂಭವಾಗಲಿದೆ. ಟೆಸ್ಟ್ ಸರರಣಿ ಬಳಿಕ 3 ಏಕದಿನ ಮತ್ತು 5 ಟಿ20 ಸರಣಿ ನಡೆಯಲಿದೆ.
Ind vs Wi first class performance by team India young players skb.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm