ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm