ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm